ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ 5,308 ಕ್ಯೂಸೆಕ್ ನೀರನ್ನು ಬಿಡಲಾಗಿದೆ.
ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದ್ದು,ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜನಪ್ರತಿನಿಧಿಗಳು ತಿಳಿಸಿದ್ದಾರೆ. ಹೀಗಿರುವಾಗ ಕಾವೇರಿ ನೀರಾವರಿ ನಿಗಮ ತಮಿಳುನಾಡಿಗೆ ನೀರು ಹರಿಸಿದೆ.
ಮುಂಗಾರಿನ ಹಿನ್ನೆಲೆ ಕೆಲ ದಿನಗಳ ಹಿಂದೆ ಕೊಡಗಿನಲ್ಲಿ ಉತ್ತಮ ಮಳೆಯಾಗಿತ್ತು. ಹೀಗಾಗಿ ಕೆಆರ್ಎಸ್ ಡ್ಯಾಂ ನೀರಿನ ಮಟ್ಟವೂ ಹೆಚ್ಚಿದೆ. ಈಗ ಮತ್ತೆ ಮಳೆ ಪ್ರಮಾಣ ತಗ್ಗಿದೆ. ಈಗಾಗಲೇ ಕೆಆರ್ಎಸ್ 113 ಅಡಿ ತುಂಬಿದೆ. ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೂ 11 ಅಡಿಯಷ್ಟೇ ಬಾಕಿ ಇದೆ.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…