krs dam
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್ಎಸ್ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 83 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಕೆಆರ್ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ನಿಮಿಷಾಂಬ ದೇವಾಲಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಬಟ್ಟೆ ಬದಲಿಸುವ ಕೊಠಡಿ ನದಿ ಪಕ್ಕದ ಮಂಟಪ ಕೂಡ ಮುಳುಗಡೆಯ ಭೀತಿಯಲ್ಲಿದ್ದು, ನದಿ ಸಮೀಪ ತೆರಳದಂತೆ ಭಕ್ತರಿಗೆ ತಾಲ್ಲೂಕು ಆಡಳಿತ ಸೂಚನೆ ನೀಡಿದೆ.
ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.
ಇನ್ನು ಶ್ರೀರಂಗಪಟ್ಟಣ ತಾಲ್ಲೂಕಿನ ಹಲವು ಪ್ರವಾಸಿ ತಾಣಗಳಿಗೂ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…