KRS Dam
ಶ್ರೀರಂಗಪಟ್ಟಣ : ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ 85,000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಮತ್ತಷ್ಟು ಹೆಚ್ಚಿನ ನೀರನ್ನು ಕಾವೇರಿ ನದಿಗೆ ಬಿಡುವ ಸಾಧ್ಯತೆಯಿದೆ. ಆ ಕಾರಣದಿಂದ ಕಾವೇರಿ ನದಿ ತೀರದ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಕೂಡಲೇ ಸೂಕ್ತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಮುನ್ನೆಚ್ಚರಿಕೆಯ ಪ್ರಕಟಣೆ ಹೊರಡಿಸಿರುವ ಅವರು, ಮಡಿಕೇರಿ, ಭಾಗಮಂಡಲ ಸೇರಿದಂತೆ ಕಾವೇರಿ ಜಲಾಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ.
ಕನ್ನಂಬಾಡಿ ಅಣೆಕಟ್ಟೆ ಈಗಾಗಲೇ ಭರ್ತಿಯಾಗಿರುವ ಹಿನ್ನೆಲೆಯಲ್ಲಿ, ಅಣೆಕಟ್ಟೆಯ ಭದ್ರತೆಯ ದೃಷ್ಟಿಯಿಂದ 50 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ. ಕಾವೇರಿ ನದಿ ತೀರ ಪ್ರದೇಶಗಳ ವೀಕ್ಷಣೆಗೆ ಬರುವ ಪ್ರವಾಸಿಗರು ಹಾಗೂ ರಾಜ್ಯದ ನಿವಾಸಿಗಳು ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಕಾವೇರಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ, ಅನಾವಶ್ಯವಾಗಿ ನೀರಿಗಿಳಿಯದಂತೆ ನಾಮಫಲಕ ಅಳವಡಿಸಿ, ಬಿಗಿ ಭದ್ರತೆ ಒದಗಿಸಲಾಗಿದೆ.
ಕಾವೇರಿ ನದಿಯಲ್ಲಿ ೮೫ ಸಾವಿರ ಕ್ಯೂ. ನೀರು ಹರಿಯುತ್ತಿರುವ ಪರಿಣಾಮ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆ ಹಂತಕ್ಕೆ ಬಂದಿರುವ ದೃಶ್ಯ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…