ಮಂಡ್ಯ

ಕೆಆರ್‌ಎಸ್‌ನಿಂದ 85,000 ಕ್ಯೂಸೆಕ್ಸ್ ನೀರು ಹೊರಕ್ಕೆ : ನದಿ ತೀರದ ನಿವಾಸಿಗಳಿಗೆ ಎಚ್ಚರಿಕೆ

ಶ್ರೀರಂಗಪಟ್ಟಣ : ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆಯಿಂದ 85,000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದ್ದು, ಯಾವುದೇ ಕ್ಷಣದಲ್ಲಾದರೂ ಮತ್ತಷ್ಟು ಹೆಚ್ಚಿನ ನೀರನ್ನು ಕಾವೇರಿ ನದಿಗೆ ಬಿಡುವ ಸಾಧ್ಯತೆಯಿದೆ. ಆ ಕಾರಣದಿಂದ ಕಾವೇರಿ ನದಿ ತೀರದ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಕೂಡಲೇ ಸೂಕ್ತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಮುನ್ನೆಚ್ಚರಿಕೆಯ ಪ್ರಕಟಣೆ ಹೊರಡಿಸಿರುವ ಅವರು, ಮಡಿಕೇರಿ, ಭಾಗಮಂಡಲ ಸೇರಿದಂತೆ ಕಾವೇರಿ ಜಲಾಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ.

ಕನ್ನಂಬಾಡಿ ಅಣೆಕಟ್ಟೆ ಈಗಾಗಲೇ ಭರ್ತಿಯಾಗಿರುವ ಹಿನ್ನೆಲೆಯಲ್ಲಿ, ಅಣೆಕಟ್ಟೆಯ ಭದ್ರತೆಯ ದೃಷ್ಟಿಯಿಂದ 50 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ. ಕಾವೇರಿ ನದಿ ತೀರ ಪ್ರದೇಶಗಳ ವೀಕ್ಷಣೆಗೆ ಬರುವ ಪ್ರವಾಸಿಗರು ಹಾಗೂ ರಾಜ್ಯದ ನಿವಾಸಿಗಳು ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಕಾವೇರಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಅನಾವಶ್ಯವಾಗಿ ನೀರಿಗಿಳಿಯದಂತೆ ನಾಮಫಲಕ ಅಳವಡಿಸಿ, ಬಿಗಿ ಭದ್ರತೆ ಒದಗಿಸಲಾಗಿದೆ.

ಕಾವೇರಿ ನದಿಯಲ್ಲಿ ೮೫ ಸಾವಿರ ಕ್ಯೂ. ನೀರು ಹರಿಯುತ್ತಿರುವ ಪರಿಣಾಮ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆ ಹಂತಕ್ಕೆ ಬಂದಿರುವ ದೃಶ್ಯ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

19 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

19 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

19 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

19 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

19 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

19 hours ago