ಮಂಡ್ಯ

ಸಾಹಿತ್ಯ ಸಮ್ಮೇಳನ | ಸಕಲ ರೀತಿಯಲ್ಲೂ ಸಜ್ಜು ; ಶಾಸಕ ನರೇಂದ್ರಸ್ವಾಮಿ

ಮೂರು ದಿನಗಳಲ್ಲಿ ವೇದಿಕೆ ನಿರ್ಮಾಣ ಕಾರ್ಯ ಪೂರ್ಣ

120 ಫುಡ್ ಕೌಂಟರ್,450 ಪುಸ್ತಕ ಮಳಿಗೆ, 250 ಶೌಚಾಲಯಗಳ ನಿರ್ಮಾಣ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿಯೂ ಸಜ್ಜಾಗಿದೆ. 64 ಎಕರೆ ಪ್ರದೇಶದಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ವೇದಿಕೆ ನಿರ್ಮಾಣ ಕಾರ್ಯದ ಸಿದ್ಧತೆ ಭರದಿಂದ ಸಾಗುತ್ತಿದೆ. ಇನ್ನೂ ಮೂರು ದಿನಗಳಲ್ಲಿ ವೇದಿಕೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶಾಸಕರು ಹಾಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ವಹಣಾ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.

ನಗರದ ಸ್ಯಾಂಜೊ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ವೇದಿಕೆ ನಿರ್ಮಾಣವಾಗುತ್ತಿರುವ ಸ್ಥಳದ ಸಿದ್ಧತೆ ಪರಿಶೀಲನೆ ನಡೆಸಿದ ನಂತರ ಮಾಧ್ಯಮಗೋಷ್ಠಿ ನಡೆಸಿ ಅವರು ಮಾತನಾಡಿದರು.

ಪ್ರಧಾನ ವೇದಿಯಲ್ಲಿ ಸುಮಾರು 40 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 450 ಪುಸ್ತಕ ಮಳಿಗೆ, 350 ವಾಣಿಜ್ಯ ಮಳಿಗೆ, 55 ಸರ್ಕಾರಿ ಮಳಿಗೆಗಳನ್ನು ನಿರ್ಮಿಸಲಾಗಿದೆ. ಊಟದ ವ್ಯವಸ್ಥೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಜನದಟ್ಟಣೆಯಾಗದಂತೆ ತಡೆಯಲು ಪ್ರತ್ಯೇಕ ಫುಡ್ ಕೌಂಟರ್ ತೆರೆಯಲಾಗಿದೆ. ನೋಂದಾಯಿತ ಪ್ರತಿನಿಧಿಗಳಿಗೆ 40, ಜನಸಾಮಾನ್ಯರಿಗೆ 120 ಫುಡ್ ಕೌಂಟರ್ ಗಳ ಜೊತೆಗೆ ಮಾಧ್ಯಮದವರಿಗೆ, ವಿಐಪಿಗಳಿಗೆ ಪ್ರತ್ಯೇಕ ಆಹಾರದ ಕೌಂಟರ್ ಮಾಡಲಾಗಿದೆ ಎಂದು ವಿವರಿಸಿದರು.

ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರುವುದರಿಂದ ಶುಚಿತ್ವಕ್ಕೆ ಮತ್ತು ಶೌಚಾಲಯಕ್ಕೆ ಪ್ರಾಧಾನ್ಯತೆ ನೀಡಲಾಗಿದೆ. 250 ಶೌಚಾಲಯ, ಅಡುಗೆ ಸಿಬ್ಬಂದಿಗಳಿಗೆ 50 ಸ್ನಾನದಗೃಹದ ವ್ಯವಸ್ಥೆ ಮಾಡಲಾಗಿದೆ. ವಿದ್ಯುತ್ ಅಡಚಣೆಯಿಂದ ತೊಂದರೆ ಆಗದಂತೆ ಜನರೇಟರ್ ವ್ಯವಸ್ಥೆ ಕೂಡ ಮಾಡಲಾಗಿದೆ. ಅಗ್ನಿ ದುರಂತ ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಸಹ ಕೈಗೊಂಡಿದ್ದು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಹಳ ವಿಜೃಂಭಣೆಯಿಂದ, ವೈಭವೋಪೇತದಿಂದ ಕೂಡಿರಲಿದೆ ಎಂದರು.

ಜಿಲ್ಲಾಡಳಿತ ಸಾಕಷ್ಟು ಮುತುವರ್ಜಿಯಿಂದ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕರು, ನೋಂದಾಯಿತ ಪ್ರತಿನಿಧಿಗಳು, ಗಣ್ಯರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ಪೊಲೀಸ್, ಅಗ್ನಿಶಾಮಕ ಸಿಬ್ಬಂದಿಯವರನ್ನು ನೇಮಿಸಲಾಗಿದೆ. ಸಮ್ಮೇಳನದ ಅಂಗವಾಗಿ ಮಳವಳ್ಳಿಯಲ್ಲಿ ಡಿ.18ರಂದು ನಾನಾ ಸಂಘಟನೆಗಳ ವತಿಯಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.

ಅತಿಥಿ ಸತ್ಕಾರಕ್ಕೆ ಹೆಸರಾಗಿರುವ ಮಂಡ್ಯ ಜಿಲ್ಲೆಗೆ ಎಲ್ಲೂ ಚ್ಯುತಿ ಬಾರದ ರೀತಿಯಲ್ಲಿ ಮಂಡ್ಯದ ಹಿರಿಮೆ, ಗರಿಮೆ ಎತ್ತಿಯಿಡುವ ನಿಟ್ಟಿನಲ್ಲಿ ಸಾಹಿತ್ಯ ಸಮ್ಮೇಳನ ಆಯೋಜಿಸಿ ಜಿಲ್ಲೆಗೆ ಕೀರ್ತಿ ತರಲಾಗುವುದು. ಇದಕ್ಕೆ ಎಲ್ಲರ ಸಹಕಾರ, ಸಹಭಾಗಿತ್ವ ಕೂಡ ಮುಖ್ಯವಾಗಿದ್ದು ಸಮ್ಮೇಳನದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಆಹಾರದ ಗುಣಮಟ್ಟ, ನೀರಿನ ಶುದ್ಧತೆ ಪರಿಶೀಲನೆ: ಡಿಸಿ ಡಾ. ಕುಮಾರ

ಸಾಹಿತ್ಯ ಸಮ್ಮೇಳನದಲ್ಲಿ ಲಕ್ಷಾಂತರ ಜನರು ಊಟ ಮಾಡುವುದರಿಂದ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಹಾರದ ಗುಣಮಟ್ಟ ಪರಿಶೀಲನೆಗಾಗಿ 10 ಜನರ ಆಹಾರ ತಜ್ಞರ ತಂಡವೊಂದನ್ನು ರಚನೆ ಮಾಡಲಾಗಿದೆ. ಮೂರು ದಿನವೂ ಆ ತಂಡ ಆಹಾರದ ಗುಣಮಟ್ಟದ ಪರಿಶೀಲನೆ ನಡೆಸಿ ವರದಿ ನೀಡಲಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು.

ನೀರಿನ ವ್ಯವಸ್ಥೆಗೆ ಕ್ರಮಕೈಗೊಳ್ಳಲಾಗಿದೆ. ಒಟ್ಟು ಮೂರು ಬೋರ್ ವೆಲ್ ಗಳಿದ್ದು ನೀರು ಪೂರೈಕೆಗೆ 5.8 ಕಿ.ಮೀ. ಉದ್ದದ ಪೈಪ್ ಲೈನ್ ವ್ಯವಸ್ಥೆ ಮಾಡಲಾಗಿದೆ. ಓವರ್ ಹೆಡ್ ಟ್ಯಾಂಕ್ ನಿಂದ ಆಹಾರ ತಯಾರಿಕಾ ಸ್ಥಳ, ಶೌಚಾಲಯಗಳಿಗೆ ನೀರು ಪೂರೈಕೆ ಆಗಲಿದೆ. 3 ಕಡೆ ಆರ್ ಓ ಪ್ಲಾಂಟ್ ನಿರ್ಮಿಸಲಾಗಿದೆ. ನೀರಿನ ಶುದ್ಧತೆ ಕೂಡ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

24 ಎಕರೆ ಜಾಗವನ್ನು ಪಾರ್ಕಿಂಗ್ ಗೆಂದೇ ನಿಗದಿಗೊಳಿಸಲಾಗಿದೆ. ನಗರದಿಂದ ಉಚಿತ ಬಸ್ ಸಂಚಾರ ಇರಲಿದೆ. ಸಮ್ಮೇಳನಕ್ಕೆ ಆಗಮಿಸುವವರಿಗೆಂದು ತಾಲೂಕು ಕೇಂದ್ರಗಳಿಂದ ಕೂಡ ಬಸ್ ವ್ಯವಸ್ಥೆ ಮಾಡಲಾಗಿದೆ. 6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರೆಶ್, ಪೇಸ್ಟ್, ಸೋಪು,ಬೆಡ್ ಶಿಟ್ ಒಳಗೊಂಡ ಲೇದರ್ ಬ್ಯಾಗ್ ನಲ್ಲಿ ವಸತಿ ಮತ್ತು ಸಮ್ಮೇಳನದ ಕಿಟ್ ನೀಡಲಾಗುವುದು ಎಂದರು.

ಪ್ಲಾಸ್ಟಿಕ್ ಮುಕ್ತ ಸಮ್ಮೇಳನ ಇದಾಗಿರಲಿದೆ. ಮಹಿಳೆಯರಿಗೆ ಸಕಲ ಸೌಲಭ್ಯ ಕಲ್ಪಿಸಲಾಗಿದೆ. ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಚಿತ ಸಾರಿಗೆ ವ್ಯವಸ್ಥೆ ಬಗ್ಗೆ ರೂಟ್ ಮ್ಯಾಪ್ ಸಿದ್ಧಪಡಿಸಿ ಹಲವು ಕಡೆಗಳಲ್ಲಿ ಅವುಗಳ ಮಾಹಿತಿಯನ್ನು ಪ್ರದರ್ಶಿಸಲಾಗುವುದು. ಒಟ್ಟಾರೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗಿದ್ದು ನುಡಿಹಬ್ಬವನ್ನು ಮನೆಹಬ್ಬದಂತೆ ಎಲ್ಲರೂ ಆಚರಿಸಬೇಕು ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

8 mins ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

29 mins ago

ಜಮ್ಮು-ಕಾಶ್ಮೀರದಲ್ಲಿ ಭೀಕರ ಹಿಮಪಾತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡರ್‌ಬಾಲ್‌ ಜಿಲ್ಲೆಯ ಝೋಜಿಲಾ ಪಾಸ್‌ ಬಳಿಯ ಝೀರೋ ಪಾಯಿಂಟ್‌ನಲ್ಲಿ ಸಂಭವಿಸಿದ ಭೀಕರ ಹಿಮಪಾತದಲ್ಲಿ ಹಲವಾರು…

41 mins ago

ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

ವಾಷಿಂಗ್ಟನ್:‌ ಇರಾನ್‌ ಬಳಿಕ ಇದೀಗ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಂದು ದೇಶದ ಮೇಲೆ ಕಣ್ಣಿಟ್ಟಿದ್ದಾರೆ. ಕ್ಯೂಬಾ ದೇಸದ ಮೇಲೆ…

50 mins ago

ಆಂದೋಲನದ ವರದಿ ಬಳಿಕ ಎಚ್ಚೆತ್ತ ಜನಪ್ರತಿನಿಧಿಗಳು: ರಸ್ತೆ ಕಾಮಗಾರಿಗೆ ಶಾಸಕ ಜಿಟಿಡಿ ಗುದ್ದಲಿ ಪೂಜೆ

ಮೈಸೂರು: ಸಿಎಂ ಸಿದ್ದರಾಮಯ್ಯ ನಿವಾಸದ ಸಮೀಪವೇ ಕುಸಿದು ಬಿದ್ದ ರಸ್ತೆ ಎಂಬ ಶೀರ್ಷಿಕೆಯಡಿ ಆಂದೋಲನ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ…

1 hour ago

ರಸ್ತೆ ದಾಟುವಾಗ ಕಾರು ಡಿಕ್ಕಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು

ಹಾಸನ: ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಆಗಷ್ಟೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನ ಕಾಮಸಮುದ್ರದ…

1 hour ago