ಮಂಡ್ಯ

ಸಾಹಿತ್ಯ ಸಮ್ಮೇಳನ | ಸಕಲ ರೀತಿಯಲ್ಲೂ ಸಜ್ಜು ; ಶಾಸಕ ನರೇಂದ್ರಸ್ವಾಮಿ

ಮೂರು ದಿನಗಳಲ್ಲಿ ವೇದಿಕೆ ನಿರ್ಮಾಣ ಕಾರ್ಯ ಪೂರ್ಣ

120 ಫುಡ್ ಕೌಂಟರ್,450 ಪುಸ್ತಕ ಮಳಿಗೆ, 250 ಶೌಚಾಲಯಗಳ ನಿರ್ಮಾಣ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿಯೂ ಸಜ್ಜಾಗಿದೆ. 64 ಎಕರೆ ಪ್ರದೇಶದಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ವೇದಿಕೆ ನಿರ್ಮಾಣ ಕಾರ್ಯದ ಸಿದ್ಧತೆ ಭರದಿಂದ ಸಾಗುತ್ತಿದೆ. ಇನ್ನೂ ಮೂರು ದಿನಗಳಲ್ಲಿ ವೇದಿಕೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶಾಸಕರು ಹಾಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ವಹಣಾ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹೇಳಿದರು.

ನಗರದ ಸ್ಯಾಂಜೊ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ವೇದಿಕೆ ನಿರ್ಮಾಣವಾಗುತ್ತಿರುವ ಸ್ಥಳದ ಸಿದ್ಧತೆ ಪರಿಶೀಲನೆ ನಡೆಸಿದ ನಂತರ ಮಾಧ್ಯಮಗೋಷ್ಠಿ ನಡೆಸಿ ಅವರು ಮಾತನಾಡಿದರು.

ಪ್ರಧಾನ ವೇದಿಯಲ್ಲಿ ಸುಮಾರು 40 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 450 ಪುಸ್ತಕ ಮಳಿಗೆ, 350 ವಾಣಿಜ್ಯ ಮಳಿಗೆ, 55 ಸರ್ಕಾರಿ ಮಳಿಗೆಗಳನ್ನು ನಿರ್ಮಿಸಲಾಗಿದೆ. ಊಟದ ವ್ಯವಸ್ಥೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಜನದಟ್ಟಣೆಯಾಗದಂತೆ ತಡೆಯಲು ಪ್ರತ್ಯೇಕ ಫುಡ್ ಕೌಂಟರ್ ತೆರೆಯಲಾಗಿದೆ. ನೋಂದಾಯಿತ ಪ್ರತಿನಿಧಿಗಳಿಗೆ 40, ಜನಸಾಮಾನ್ಯರಿಗೆ 120 ಫುಡ್ ಕೌಂಟರ್ ಗಳ ಜೊತೆಗೆ ಮಾಧ್ಯಮದವರಿಗೆ, ವಿಐಪಿಗಳಿಗೆ ಪ್ರತ್ಯೇಕ ಆಹಾರದ ಕೌಂಟರ್ ಮಾಡಲಾಗಿದೆ ಎಂದು ವಿವರಿಸಿದರು.

ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರುವುದರಿಂದ ಶುಚಿತ್ವಕ್ಕೆ ಮತ್ತು ಶೌಚಾಲಯಕ್ಕೆ ಪ್ರಾಧಾನ್ಯತೆ ನೀಡಲಾಗಿದೆ. 250 ಶೌಚಾಲಯ, ಅಡುಗೆ ಸಿಬ್ಬಂದಿಗಳಿಗೆ 50 ಸ್ನಾನದಗೃಹದ ವ್ಯವಸ್ಥೆ ಮಾಡಲಾಗಿದೆ. ವಿದ್ಯುತ್ ಅಡಚಣೆಯಿಂದ ತೊಂದರೆ ಆಗದಂತೆ ಜನರೇಟರ್ ವ್ಯವಸ್ಥೆ ಕೂಡ ಮಾಡಲಾಗಿದೆ. ಅಗ್ನಿ ದುರಂತ ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಸಹ ಕೈಗೊಂಡಿದ್ದು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಹಳ ವಿಜೃಂಭಣೆಯಿಂದ, ವೈಭವೋಪೇತದಿಂದ ಕೂಡಿರಲಿದೆ ಎಂದರು.

ಜಿಲ್ಲಾಡಳಿತ ಸಾಕಷ್ಟು ಮುತುವರ್ಜಿಯಿಂದ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕರು, ನೋಂದಾಯಿತ ಪ್ರತಿನಿಧಿಗಳು, ಗಣ್ಯರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ಪೊಲೀಸ್, ಅಗ್ನಿಶಾಮಕ ಸಿಬ್ಬಂದಿಯವರನ್ನು ನೇಮಿಸಲಾಗಿದೆ. ಸಮ್ಮೇಳನದ ಅಂಗವಾಗಿ ಮಳವಳ್ಳಿಯಲ್ಲಿ ಡಿ.18ರಂದು ನಾನಾ ಸಂಘಟನೆಗಳ ವತಿಯಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.

ಅತಿಥಿ ಸತ್ಕಾರಕ್ಕೆ ಹೆಸರಾಗಿರುವ ಮಂಡ್ಯ ಜಿಲ್ಲೆಗೆ ಎಲ್ಲೂ ಚ್ಯುತಿ ಬಾರದ ರೀತಿಯಲ್ಲಿ ಮಂಡ್ಯದ ಹಿರಿಮೆ, ಗರಿಮೆ ಎತ್ತಿಯಿಡುವ ನಿಟ್ಟಿನಲ್ಲಿ ಸಾಹಿತ್ಯ ಸಮ್ಮೇಳನ ಆಯೋಜಿಸಿ ಜಿಲ್ಲೆಗೆ ಕೀರ್ತಿ ತರಲಾಗುವುದು. ಇದಕ್ಕೆ ಎಲ್ಲರ ಸಹಕಾರ, ಸಹಭಾಗಿತ್ವ ಕೂಡ ಮುಖ್ಯವಾಗಿದ್ದು ಸಮ್ಮೇಳನದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಆಹಾರದ ಗುಣಮಟ್ಟ, ನೀರಿನ ಶುದ್ಧತೆ ಪರಿಶೀಲನೆ: ಡಿಸಿ ಡಾ. ಕುಮಾರ

ಸಾಹಿತ್ಯ ಸಮ್ಮೇಳನದಲ್ಲಿ ಲಕ್ಷಾಂತರ ಜನರು ಊಟ ಮಾಡುವುದರಿಂದ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಹಾರದ ಗುಣಮಟ್ಟ ಪರಿಶೀಲನೆಗಾಗಿ 10 ಜನರ ಆಹಾರ ತಜ್ಞರ ತಂಡವೊಂದನ್ನು ರಚನೆ ಮಾಡಲಾಗಿದೆ. ಮೂರು ದಿನವೂ ಆ ತಂಡ ಆಹಾರದ ಗುಣಮಟ್ಟದ ಪರಿಶೀಲನೆ ನಡೆಸಿ ವರದಿ ನೀಡಲಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು.

ನೀರಿನ ವ್ಯವಸ್ಥೆಗೆ ಕ್ರಮಕೈಗೊಳ್ಳಲಾಗಿದೆ. ಒಟ್ಟು ಮೂರು ಬೋರ್ ವೆಲ್ ಗಳಿದ್ದು ನೀರು ಪೂರೈಕೆಗೆ 5.8 ಕಿ.ಮೀ. ಉದ್ದದ ಪೈಪ್ ಲೈನ್ ವ್ಯವಸ್ಥೆ ಮಾಡಲಾಗಿದೆ. ಓವರ್ ಹೆಡ್ ಟ್ಯಾಂಕ್ ನಿಂದ ಆಹಾರ ತಯಾರಿಕಾ ಸ್ಥಳ, ಶೌಚಾಲಯಗಳಿಗೆ ನೀರು ಪೂರೈಕೆ ಆಗಲಿದೆ. 3 ಕಡೆ ಆರ್ ಓ ಪ್ಲಾಂಟ್ ನಿರ್ಮಿಸಲಾಗಿದೆ. ನೀರಿನ ಶುದ್ಧತೆ ಕೂಡ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

24 ಎಕರೆ ಜಾಗವನ್ನು ಪಾರ್ಕಿಂಗ್ ಗೆಂದೇ ನಿಗದಿಗೊಳಿಸಲಾಗಿದೆ. ನಗರದಿಂದ ಉಚಿತ ಬಸ್ ಸಂಚಾರ ಇರಲಿದೆ. ಸಮ್ಮೇಳನಕ್ಕೆ ಆಗಮಿಸುವವರಿಗೆಂದು ತಾಲೂಕು ಕೇಂದ್ರಗಳಿಂದ ಕೂಡ ಬಸ್ ವ್ಯವಸ್ಥೆ ಮಾಡಲಾಗಿದೆ. 6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರೆಶ್, ಪೇಸ್ಟ್, ಸೋಪು,ಬೆಡ್ ಶಿಟ್ ಒಳಗೊಂಡ ಲೇದರ್ ಬ್ಯಾಗ್ ನಲ್ಲಿ ವಸತಿ ಮತ್ತು ಸಮ್ಮೇಳನದ ಕಿಟ್ ನೀಡಲಾಗುವುದು ಎಂದರು.

ಪ್ಲಾಸ್ಟಿಕ್ ಮುಕ್ತ ಸಮ್ಮೇಳನ ಇದಾಗಿರಲಿದೆ. ಮಹಿಳೆಯರಿಗೆ ಸಕಲ ಸೌಲಭ್ಯ ಕಲ್ಪಿಸಲಾಗಿದೆ. ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಚಿತ ಸಾರಿಗೆ ವ್ಯವಸ್ಥೆ ಬಗ್ಗೆ ರೂಟ್ ಮ್ಯಾಪ್ ಸಿದ್ಧಪಡಿಸಿ ಹಲವು ಕಡೆಗಳಲ್ಲಿ ಅವುಗಳ ಮಾಹಿತಿಯನ್ನು ಪ್ರದರ್ಶಿಸಲಾಗುವುದು. ಒಟ್ಟಾರೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗಿದ್ದು ನುಡಿಹಬ್ಬವನ್ನು ಮನೆಹಬ್ಬದಂತೆ ಎಲ್ಲರೂ ಆಚರಿಸಬೇಕು ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

8 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

8 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

9 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

10 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

15 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

15 hours ago