Categories: ಮಂಡ್ಯ

ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಹಬ್ಬಕ್ಕೆ ಭರ್ಜರಿ ಸಿದ್ಧತೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ.

ಈಗಾಗಲೇ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾಧ್ಯಮ ಸಮನ್ವಯ ಸಮಿತಿ ಸಭೆ ನಡೆದಿದ್ದು, ವಿಧಾನಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಸಮ್ಮೇಳನದ ಯಶಸ್ವಿಗೆ ಮಾಧ್ಯಮದ ಪಾತ್ರ ಬಹಳ ಮುಖ್ಯವಾಗಿದೆ. ಸಾಹಿತ್ಯ ಸಮ್ಮೇಳನದ ಕುರಿತು ಮಾಧ್ಯಮದಲ್ಲಿ ವ್ಯಾಪಕ ಪ್ರಚಾರ ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಮಾಧ್ಯಮದವರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದು ಕನ್ನಡದ ಹಬ್ಬವಾಗಿರುವುದರಿಂದ ಎಲ್ಲರ ಸಹಕಾರ ಮುಖ್ಯವಾಗಿದೆ. ಹಾಗಾಗಿ ಎಲ್ಲರೂ ಕೂಡ ಹೆಚ್ಚಿನ ಪ್ರಚಾರ ನೀಡಿ ಸಕ್ಕರೆ ನಾಡಿನ ಘಮಲನ್ನು ಎಲ್ಲಾ ಕಡೆ ಪಸರಿಸುವಂತೆ ಕರೆ ನೀಡಿದ್ದಾರೆ.

ಇನ್ನು ರಾಜ್ಯ, ರಾಷ್ಟ್ರದ ನಾನಾ ಭಾಗಗಳಿಂದ ಬರುವವರಿಗೆ ಸಕಲ ವ್ಯವಸ್ಥೆ ಮಾಡಲಾಗಿದ್ದು, ಊಟ, ಪುಸ್ತಕ ಮಳಿಗೆ, ವೇದಿಕೆ ಒಂದೇ ಕಡೆ ಇರುವಂತೆ ಜಾಗ ಗುರುತಿಸಲಾಗಿದೆ.

ಇನ್ನು ಪ್ರಮುಖವಾಗಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗಿದ್ದು, ನುಡಿ ಜಾತ್ರೆಗೆ ಭರ್ಜರಿ ಸಿದ್ಧತೆ ಕೈಗೊಳ್ಳಲಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

48 mins ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

52 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

58 mins ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

1 hour ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

1 hour ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

2 hours ago