ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ.
ಈಗಾಗಲೇ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾಧ್ಯಮ ಸಮನ್ವಯ ಸಮಿತಿ ಸಭೆ ನಡೆದಿದ್ದು, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಸಮ್ಮೇಳನದ ಯಶಸ್ವಿಗೆ ಮಾಧ್ಯಮದ ಪಾತ್ರ ಬಹಳ ಮುಖ್ಯವಾಗಿದೆ. ಸಾಹಿತ್ಯ ಸಮ್ಮೇಳನದ ಕುರಿತು ಮಾಧ್ಯಮದಲ್ಲಿ ವ್ಯಾಪಕ ಪ್ರಚಾರ ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಮಾಧ್ಯಮದವರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದು ಕನ್ನಡದ ಹಬ್ಬವಾಗಿರುವುದರಿಂದ ಎಲ್ಲರ ಸಹಕಾರ ಮುಖ್ಯವಾಗಿದೆ. ಹಾಗಾಗಿ ಎಲ್ಲರೂ ಕೂಡ ಹೆಚ್ಚಿನ ಪ್ರಚಾರ ನೀಡಿ ಸಕ್ಕರೆ ನಾಡಿನ ಘಮಲನ್ನು ಎಲ್ಲಾ ಕಡೆ ಪಸರಿಸುವಂತೆ ಕರೆ ನೀಡಿದ್ದಾರೆ.
ಇನ್ನು ರಾಜ್ಯ, ರಾಷ್ಟ್ರದ ನಾನಾ ಭಾಗಗಳಿಂದ ಬರುವವರಿಗೆ ಸಕಲ ವ್ಯವಸ್ಥೆ ಮಾಡಲಾಗಿದ್ದು, ಊಟ, ಪುಸ್ತಕ ಮಳಿಗೆ, ವೇದಿಕೆ ಒಂದೇ ಕಡೆ ಇರುವಂತೆ ಜಾಗ ಗುರುತಿಸಲಾಗಿದೆ.
ಇನ್ನು ಪ್ರಮುಖವಾಗಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗಿದ್ದು, ನುಡಿ ಜಾತ್ರೆಗೆ ಭರ್ಜರಿ ಸಿದ್ಧತೆ ಕೈಗೊಳ್ಳಲಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…