ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ.
ಈಗಾಗಲೇ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಾಧ್ಯಮ ಸಮನ್ವಯ ಸಮಿತಿ ಸಭೆ ನಡೆದಿದ್ದು, ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಸಮ್ಮೇಳನದ ಯಶಸ್ವಿಗೆ ಮಾಧ್ಯಮದ ಪಾತ್ರ ಬಹಳ ಮುಖ್ಯವಾಗಿದೆ. ಸಾಹಿತ್ಯ ಸಮ್ಮೇಳನದ ಕುರಿತು ಮಾಧ್ಯಮದಲ್ಲಿ ವ್ಯಾಪಕ ಪ್ರಚಾರ ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಮಾಧ್ಯಮದವರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದು ಕನ್ನಡದ ಹಬ್ಬವಾಗಿರುವುದರಿಂದ ಎಲ್ಲರ ಸಹಕಾರ ಮುಖ್ಯವಾಗಿದೆ. ಹಾಗಾಗಿ ಎಲ್ಲರೂ ಕೂಡ ಹೆಚ್ಚಿನ ಪ್ರಚಾರ ನೀಡಿ ಸಕ್ಕರೆ ನಾಡಿನ ಘಮಲನ್ನು ಎಲ್ಲಾ ಕಡೆ ಪಸರಿಸುವಂತೆ ಕರೆ ನೀಡಿದ್ದಾರೆ.
ಇನ್ನು ರಾಜ್ಯ, ರಾಷ್ಟ್ರದ ನಾನಾ ಭಾಗಗಳಿಂದ ಬರುವವರಿಗೆ ಸಕಲ ವ್ಯವಸ್ಥೆ ಮಾಡಲಾಗಿದ್ದು, ಊಟ, ಪುಸ್ತಕ ಮಳಿಗೆ, ವೇದಿಕೆ ಒಂದೇ ಕಡೆ ಇರುವಂತೆ ಜಾಗ ಗುರುತಿಸಲಾಗಿದೆ.
ಇನ್ನು ಪ್ರಮುಖವಾಗಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗಿದ್ದು, ನುಡಿ ಜಾತ್ರೆಗೆ ಭರ್ಜರಿ ಸಿದ್ಧತೆ ಕೈಗೊಳ್ಳಲಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…