ಮಂಡ್ಯ

87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಮೆರಗು ತಂದ ಕಲಾತಂಡಗಳು

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ಧೂರಿಯಾಗಿ ನೆರವೇರಿದ್ದು,  ಇದರಲ್ಲಿ  ಸುಮಾರು 157 ಕಲಾತಂಡಗಳು ಭಾಗವಹಿಸಿ ಸಮ್ಮೇಳನಕ್ಕೆ ಮೆರಗು ತಂದಿವೆ.

87ನೇ ನುಡಿ ಜಾತ್ರೆಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರನ್ನು ಅರಮನೆ ದರ್ಬಾರ್‌ ಸಿಂಹಾಸನವನ್ನೊಳಗೊಂಡ ವಿಶೇಷ ರಥದ ಮೂಲಕ ಮೆರವಣಿಗೆ ನೆರವೇರಿಸಲಾಗಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಚಾಲನೆ ನೀಡಬೇಕಿತ್ತು. ಆದರೆ ಅವರ ಗೈರು ಹಾಜರಿಯಿಂದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರೇ ಮೆರವಣಿಗೆ ಚಾಲನೆ ನೀಡಿದ್ದಾರೆ. ಬಳಿಕ ಮೈಸೂರು ಪೊಲೀಸ್‌ ಬ್ಯಾಂಡ್‌ ಭಾಗವಹಿಸಿರುವುದು ಈ ಮೆರವಣಿಗೆಗೆ ಇನ್ನಷ್ಟು ಹೆಚ್ಚು ಮೆರಗು ನೀಡಿದಂತಾಗಿದೆ.

ಈ ಬಾರಿಯ ಸಾಹಿತ್ಯ ಸಮ್ಮೇಳನದಲ್ಲಿ ನಂದಿಧ್ವಜ, ಚಕ್ಕಡಿಗಾಡಿ, ಕೊಂಬುಕಹಳೆ, ನಾದಸ್ವರ, ಸ್ತಬ್ಧಚಿತ್ರ, ವೀರಗಾಸೆ, ತಮಟೆ, ಕಂಸಾಳೆ, ಮಹಿಳಾ ವೀರಗಾಸೆ, ಕೀಲುಕುದುರೆ, ಜಗ್ಗಲಿಗೆ ಮೇಳ, ಪೂರ್ಣಕುಂಭ, ನಗಾರಿ, ಛತ್ರಿಚಾಮರ, ಲಿಡಕರ್ ಸ್ತಬ್ಧಚಿತ್ರ, ಖಾಸಬೇಡರಪಡೆ, ಭಾಗವಂತಿಕೆ, ಹಗಲು ವೇಷ, ಅರೆವಾದ್ಯ, ಪೆಟ್ಟಿಗೆ ಮಾರಮ್ಮ, ಕೋಲಾಟ, ಗಾರುಡಿಗೊಂಬೆ, ಕರಗ, ಚಿಲಿಪಿಲಿ ಗೊಂಬೆ, ದಾಸಪ್ಪ ಜೋಗಪ್ಪ, ಬೆಂಕಿಭರಾಟೆ, ದೊಣ್ಣೆ ವರಸೆ, ಚಿಟ್ಟಲಗಿ ಮೇಳ, ಷಹನಾಯವಾದನ, ಗಾರುಡಿ ಗೊಂಬೆ, ಯಕ್ಷಗಾನ ಗೊಂಬೆ, ವಾನರಸೇನೆ, ಕರಡಿ ಮಜಲು, ದೇವಿ ವೇಷಧಾರಿ, ಕೀಲು ಕುದುರೆ, ನೃತ್ಯ, ಮರಗಾಲು, ಮುಳ್ಳು ಕುಣಿತ, ಡೊಳ್ಳು ಕುಣಿತ, ಪೂಜಾಕುಣಿತ, ಡೊಳ್ಳು ಕುಣಿತ, ಹಾಲಕ್ಕಿ ಸುಗ್ಗಿ ಕುಣಿತ, ಪಟಕುಣಿತ, ರಂಗದಕುಣಿತ, ಮಹಿಳಾ ಡೊಳ್ಳು ಕುಣಿತ, ಸೋಮನ ಕುಣಿತ, ಗೊರವರ ಕುಣಿತ, ಲಂಬಾಣಿ ನೃತ್ಯ, ಕೋಳಿ ನೃತ್ಯ, ಕೊಡವ ನೃತ್ಯ, ಜೋಗತಿ ನೃತ್ಯ,  ವೀರಮಕ್ಕಳ ಕುಣಿತ, ಸತ್ತಿಗೆ ಕುಣಿತ,  ದಟ್ಟಿ ಕುಣಿತ,  ಹಲಗು ಕುಣಿತ, ಪಟಕುಣಿತ, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪೇಗೌಡ, ವಿಶ್ವೇಶ್ವರಯ್ಯ ವೇಷಧಾರಿ, ಅಶ್ವಾರೋಹಿ ದಳ, ಟಾಂಗಾ ಗಾಡಿ, ಎತ್ತಿನ ಗಾಡಿ, ಸಮ್ಮೇಳನಾಧ್ಯಕ್ಷರ ಭಾವಚಿತ್ರ ಒಳಗೊಂಡ 87 ಆಟೋ ರಿಕ್ಷಾಗಳು, ಸ್ಕೌಟ್ಸ್ ಮತ್ತು ಗೈಟ್ಸ್, ಎನ್ ಸಿಸಿ, ಭಾರತ್ ಸೇವಾದಳ ತಂಡ ಸೇರಿದಂತೆ 157 ಕಲಾತಂಡಗಳು ಹಾಗೂ 2,2250 ಕಲಾವಿದರು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ಹೊರರಾಜ್ಯದ ಕಲಾ ಪ್ರಕಾರಗಳು

ತಮಿಳುನಾಡಿನ ಕರಗಂ, ಒಡಿಶಾದ ಸಂಬಲ್ಪುರಿ ಮತ್ತು ಧಾಪ್ ಬುಡಕಟ್ಟು ನೃತ್ಯ, ಮಧ್ಯಪ್ರದೇಶದ ಬಧಾಯಿ ಮತ್ತು ನೋರಾ, ಕಲಾ ಪ್ರಕಾರಗಳು ಒಳಗೊಂಡಂತೆ, ನಾನಾ ಜಿಲ್ಲೆಯ ನೂರಾರು ಕಲಾತಂಡಗಳು ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಸಾಗಿರುವುದು ಬಹಳ ವಿಶೇಷವಾಗಿದೆ.

ಅರ್ಚನ ಎಸ್‌ ಎಸ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

7 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

7 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

8 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

9 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

9 hours ago