ಮಂಡ್ಯ

87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಮೆರಗು ತಂದ ಕಲಾತಂಡಗಳು

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ಧೂರಿಯಾಗಿ ನೆರವೇರಿದ್ದು,  ಇದರಲ್ಲಿ  ಸುಮಾರು 157 ಕಲಾತಂಡಗಳು ಭಾಗವಹಿಸಿ ಸಮ್ಮೇಳನಕ್ಕೆ ಮೆರಗು ತಂದಿವೆ.

87ನೇ ನುಡಿ ಜಾತ್ರೆಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರನ್ನು ಅರಮನೆ ದರ್ಬಾರ್‌ ಸಿಂಹಾಸನವನ್ನೊಳಗೊಂಡ ವಿಶೇಷ ರಥದ ಮೂಲಕ ಮೆರವಣಿಗೆ ನೆರವೇರಿಸಲಾಗಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಚಾಲನೆ ನೀಡಬೇಕಿತ್ತು. ಆದರೆ ಅವರ ಗೈರು ಹಾಜರಿಯಿಂದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರೇ ಮೆರವಣಿಗೆ ಚಾಲನೆ ನೀಡಿದ್ದಾರೆ. ಬಳಿಕ ಮೈಸೂರು ಪೊಲೀಸ್‌ ಬ್ಯಾಂಡ್‌ ಭಾಗವಹಿಸಿರುವುದು ಈ ಮೆರವಣಿಗೆಗೆ ಇನ್ನಷ್ಟು ಹೆಚ್ಚು ಮೆರಗು ನೀಡಿದಂತಾಗಿದೆ.

ಈ ಬಾರಿಯ ಸಾಹಿತ್ಯ ಸಮ್ಮೇಳನದಲ್ಲಿ ನಂದಿಧ್ವಜ, ಚಕ್ಕಡಿಗಾಡಿ, ಕೊಂಬುಕಹಳೆ, ನಾದಸ್ವರ, ಸ್ತಬ್ಧಚಿತ್ರ, ವೀರಗಾಸೆ, ತಮಟೆ, ಕಂಸಾಳೆ, ಮಹಿಳಾ ವೀರಗಾಸೆ, ಕೀಲುಕುದುರೆ, ಜಗ್ಗಲಿಗೆ ಮೇಳ, ಪೂರ್ಣಕುಂಭ, ನಗಾರಿ, ಛತ್ರಿಚಾಮರ, ಲಿಡಕರ್ ಸ್ತಬ್ಧಚಿತ್ರ, ಖಾಸಬೇಡರಪಡೆ, ಭಾಗವಂತಿಕೆ, ಹಗಲು ವೇಷ, ಅರೆವಾದ್ಯ, ಪೆಟ್ಟಿಗೆ ಮಾರಮ್ಮ, ಕೋಲಾಟ, ಗಾರುಡಿಗೊಂಬೆ, ಕರಗ, ಚಿಲಿಪಿಲಿ ಗೊಂಬೆ, ದಾಸಪ್ಪ ಜೋಗಪ್ಪ, ಬೆಂಕಿಭರಾಟೆ, ದೊಣ್ಣೆ ವರಸೆ, ಚಿಟ್ಟಲಗಿ ಮೇಳ, ಷಹನಾಯವಾದನ, ಗಾರುಡಿ ಗೊಂಬೆ, ಯಕ್ಷಗಾನ ಗೊಂಬೆ, ವಾನರಸೇನೆ, ಕರಡಿ ಮಜಲು, ದೇವಿ ವೇಷಧಾರಿ, ಕೀಲು ಕುದುರೆ, ನೃತ್ಯ, ಮರಗಾಲು, ಮುಳ್ಳು ಕುಣಿತ, ಡೊಳ್ಳು ಕುಣಿತ, ಪೂಜಾಕುಣಿತ, ಡೊಳ್ಳು ಕುಣಿತ, ಹಾಲಕ್ಕಿ ಸುಗ್ಗಿ ಕುಣಿತ, ಪಟಕುಣಿತ, ರಂಗದಕುಣಿತ, ಮಹಿಳಾ ಡೊಳ್ಳು ಕುಣಿತ, ಸೋಮನ ಕುಣಿತ, ಗೊರವರ ಕುಣಿತ, ಲಂಬಾಣಿ ನೃತ್ಯ, ಕೋಳಿ ನೃತ್ಯ, ಕೊಡವ ನೃತ್ಯ, ಜೋಗತಿ ನೃತ್ಯ,  ವೀರಮಕ್ಕಳ ಕುಣಿತ, ಸತ್ತಿಗೆ ಕುಣಿತ,  ದಟ್ಟಿ ಕುಣಿತ,  ಹಲಗು ಕುಣಿತ, ಪಟಕುಣಿತ, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪೇಗೌಡ, ವಿಶ್ವೇಶ್ವರಯ್ಯ ವೇಷಧಾರಿ, ಅಶ್ವಾರೋಹಿ ದಳ, ಟಾಂಗಾ ಗಾಡಿ, ಎತ್ತಿನ ಗಾಡಿ, ಸಮ್ಮೇಳನಾಧ್ಯಕ್ಷರ ಭಾವಚಿತ್ರ ಒಳಗೊಂಡ 87 ಆಟೋ ರಿಕ್ಷಾಗಳು, ಸ್ಕೌಟ್ಸ್ ಮತ್ತು ಗೈಟ್ಸ್, ಎನ್ ಸಿಸಿ, ಭಾರತ್ ಸೇವಾದಳ ತಂಡ ಸೇರಿದಂತೆ 157 ಕಲಾತಂಡಗಳು ಹಾಗೂ 2,2250 ಕಲಾವಿದರು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ಹೊರರಾಜ್ಯದ ಕಲಾ ಪ್ರಕಾರಗಳು

ತಮಿಳುನಾಡಿನ ಕರಗಂ, ಒಡಿಶಾದ ಸಂಬಲ್ಪುರಿ ಮತ್ತು ಧಾಪ್ ಬುಡಕಟ್ಟು ನೃತ್ಯ, ಮಧ್ಯಪ್ರದೇಶದ ಬಧಾಯಿ ಮತ್ತು ನೋರಾ, ಕಲಾ ಪ್ರಕಾರಗಳು ಒಳಗೊಂಡಂತೆ, ನಾನಾ ಜಿಲ್ಲೆಯ ನೂರಾರು ಕಲಾತಂಡಗಳು ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಸಾಗಿರುವುದು ಬಹಳ ವಿಶೇಷವಾಗಿದೆ.

ಅರ್ಚನ ಎಸ್‌ ಎಸ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

10 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

11 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

12 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

12 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

13 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

13 hours ago