ಮಂಡ್ಯ

87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಮೆರಗು ತಂದ ಕಲಾತಂಡಗಳು

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ಧೂರಿಯಾಗಿ ನೆರವೇರಿದ್ದು,  ಇದರಲ್ಲಿ  ಸುಮಾರು 157 ಕಲಾತಂಡಗಳು ಭಾಗವಹಿಸಿ ಸಮ್ಮೇಳನಕ್ಕೆ ಮೆರಗು ತಂದಿವೆ.

87ನೇ ನುಡಿ ಜಾತ್ರೆಯ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರನ್ನು ಅರಮನೆ ದರ್ಬಾರ್‌ ಸಿಂಹಾಸನವನ್ನೊಳಗೊಂಡ ವಿಶೇಷ ರಥದ ಮೂಲಕ ಮೆರವಣಿಗೆ ನೆರವೇರಿಸಲಾಗಿದೆ. ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಚಾಲನೆ ನೀಡಬೇಕಿತ್ತು. ಆದರೆ ಅವರ ಗೈರು ಹಾಜರಿಯಿಂದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅವರೇ ಮೆರವಣಿಗೆ ಚಾಲನೆ ನೀಡಿದ್ದಾರೆ. ಬಳಿಕ ಮೈಸೂರು ಪೊಲೀಸ್‌ ಬ್ಯಾಂಡ್‌ ಭಾಗವಹಿಸಿರುವುದು ಈ ಮೆರವಣಿಗೆಗೆ ಇನ್ನಷ್ಟು ಹೆಚ್ಚು ಮೆರಗು ನೀಡಿದಂತಾಗಿದೆ.

ಈ ಬಾರಿಯ ಸಾಹಿತ್ಯ ಸಮ್ಮೇಳನದಲ್ಲಿ ನಂದಿಧ್ವಜ, ಚಕ್ಕಡಿಗಾಡಿ, ಕೊಂಬುಕಹಳೆ, ನಾದಸ್ವರ, ಸ್ತಬ್ಧಚಿತ್ರ, ವೀರಗಾಸೆ, ತಮಟೆ, ಕಂಸಾಳೆ, ಮಹಿಳಾ ವೀರಗಾಸೆ, ಕೀಲುಕುದುರೆ, ಜಗ್ಗಲಿಗೆ ಮೇಳ, ಪೂರ್ಣಕುಂಭ, ನಗಾರಿ, ಛತ್ರಿಚಾಮರ, ಲಿಡಕರ್ ಸ್ತಬ್ಧಚಿತ್ರ, ಖಾಸಬೇಡರಪಡೆ, ಭಾಗವಂತಿಕೆ, ಹಗಲು ವೇಷ, ಅರೆವಾದ್ಯ, ಪೆಟ್ಟಿಗೆ ಮಾರಮ್ಮ, ಕೋಲಾಟ, ಗಾರುಡಿಗೊಂಬೆ, ಕರಗ, ಚಿಲಿಪಿಲಿ ಗೊಂಬೆ, ದಾಸಪ್ಪ ಜೋಗಪ್ಪ, ಬೆಂಕಿಭರಾಟೆ, ದೊಣ್ಣೆ ವರಸೆ, ಚಿಟ್ಟಲಗಿ ಮೇಳ, ಷಹನಾಯವಾದನ, ಗಾರುಡಿ ಗೊಂಬೆ, ಯಕ್ಷಗಾನ ಗೊಂಬೆ, ವಾನರಸೇನೆ, ಕರಡಿ ಮಜಲು, ದೇವಿ ವೇಷಧಾರಿ, ಕೀಲು ಕುದುರೆ, ನೃತ್ಯ, ಮರಗಾಲು, ಮುಳ್ಳು ಕುಣಿತ, ಡೊಳ್ಳು ಕುಣಿತ, ಪೂಜಾಕುಣಿತ, ಡೊಳ್ಳು ಕುಣಿತ, ಹಾಲಕ್ಕಿ ಸುಗ್ಗಿ ಕುಣಿತ, ಪಟಕುಣಿತ, ರಂಗದಕುಣಿತ, ಮಹಿಳಾ ಡೊಳ್ಳು ಕುಣಿತ, ಸೋಮನ ಕುಣಿತ, ಗೊರವರ ಕುಣಿತ, ಲಂಬಾಣಿ ನೃತ್ಯ, ಕೋಳಿ ನೃತ್ಯ, ಕೊಡವ ನೃತ್ಯ, ಜೋಗತಿ ನೃತ್ಯ,  ವೀರಮಕ್ಕಳ ಕುಣಿತ, ಸತ್ತಿಗೆ ಕುಣಿತ,  ದಟ್ಟಿ ಕುಣಿತ,  ಹಲಗು ಕುಣಿತ, ಪಟಕುಣಿತ, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪೇಗೌಡ, ವಿಶ್ವೇಶ್ವರಯ್ಯ ವೇಷಧಾರಿ, ಅಶ್ವಾರೋಹಿ ದಳ, ಟಾಂಗಾ ಗಾಡಿ, ಎತ್ತಿನ ಗಾಡಿ, ಸಮ್ಮೇಳನಾಧ್ಯಕ್ಷರ ಭಾವಚಿತ್ರ ಒಳಗೊಂಡ 87 ಆಟೋ ರಿಕ್ಷಾಗಳು, ಸ್ಕೌಟ್ಸ್ ಮತ್ತು ಗೈಟ್ಸ್, ಎನ್ ಸಿಸಿ, ಭಾರತ್ ಸೇವಾದಳ ತಂಡ ಸೇರಿದಂತೆ 157 ಕಲಾತಂಡಗಳು ಹಾಗೂ 2,2250 ಕಲಾವಿದರು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ಹೊರರಾಜ್ಯದ ಕಲಾ ಪ್ರಕಾರಗಳು

ತಮಿಳುನಾಡಿನ ಕರಗಂ, ಒಡಿಶಾದ ಸಂಬಲ್ಪುರಿ ಮತ್ತು ಧಾಪ್ ಬುಡಕಟ್ಟು ನೃತ್ಯ, ಮಧ್ಯಪ್ರದೇಶದ ಬಧಾಯಿ ಮತ್ತು ನೋರಾ, ಕಲಾ ಪ್ರಕಾರಗಳು ಒಳಗೊಂಡಂತೆ, ನಾನಾ ಜಿಲ್ಲೆಯ ನೂರಾರು ಕಲಾತಂಡಗಳು ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಸಾಗಿರುವುದು ಬಹಳ ವಿಶೇಷವಾಗಿದೆ.

ಅರ್ಚನ ಎಸ್‌ ಎಸ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

1 hour ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

3 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

4 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

6 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

12 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

18 hours ago