ಮಂಡ್ಯ: ಕೃಷಿ ಪ್ರಧಾನ ಜಿಲ್ಲೆ ಹಾಗೂ ಸಕ್ಕರೆ ನಾಡು ಎಂದು ಕರೆಯಿಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 95 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ 2015 ಇಸವಿಯಿಂದ ಈಚೆಗೆ ಮಂಡ್ಯ ಜಿಲ್ಲೆಯಲ್ಲಿ ಅನ್ನದಾತರ ಆತ್ಮಹತ್ಯೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಸಾಲದ ಶೂಲಕ್ಕೆ ಸಿಲುಕಿ ರೈತರು ಸಾವೀಗೀಡಾಗುತ್ತಿದ್ದಾರೆ.
ಅನ್ನದಾತರ ಜೀವನ ಭದ್ರತೆ, ಕೃಷಿಯಲ್ಲಿನ ಸಮಸ್ಯೆಗಳು, ಕಬ್ಬು ಸೇರಿದಂತೆ ಅನೇಕ ಉತ್ಪನ್ನಗಳಿಗೆ ಬೆಂಬಲ ಬೆಲೆ, ವೈಜ್ಞಾನಿಕ ಬೆಲೆ ನಿಗದಿ ಸೇರಿದಂತೆ ಅನೇಕ ಸಮಸ್ಯೆಗಳಿಂದಲೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂಬ ವರದಿ ಬಹಿರಂಗವಾಗಿದೆ.
ಇದರ ಜೊತೆಗೆ ಅತಿವೃಷ್ಟಿ ಹಾಗೂ ಅನಾವೃಷ್ಟಿ ಸೇರಿದಂತೆ ಅನೇಕ ಸಮಸ್ಯೆ ಎದುರಿಸುತ್ತಿರುವ ರೈತರು, ಬೆಳೆ ನಾಶದಿಂದ ತೀವ್ರ ಕಂಗಾಲಾಗುತ್ತಿದ್ದಾರೆ.
ಇದರ ಜೊತೆಗೆ ನೀರು, ವಿದ್ಯುತ್ ಸಮಸ್ಯೆ, ಬೆಳೆಗಳಿಗೆ ಬೆಲೆ ಕುಸಿತ, ಹವಾಮಾನ ವೈಪರೀತ್ಯ, ರಸಗೊಬ್ಬರಗಳ ಬೆಲೆ ಏರಿಕೆ, ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಹಾವಳಿ, ಮೈಕ್ರೋ ಫೈನಾನ್ಸ್ಗಳ ಕಿರುಕುಳ ಸೇರಿದಂತೆ ಹತ್ತಾರು ಕಾರಣಗಳಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.
ನಮ್ಮ ತಂದೆ ಪೋರ್ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಜನಶೀಲತೆಯ ವೇದಿಕೆಗಳಾಗುವ ಬದಲು ಹಣದಾಸೆಗಾಗಿ ಅಶ್ಲೀಲತೆಯನ್ನು ಪ್ರದರ್ಶಿಸುವ ಮಾರುಕಟ್ಟೆಗಳಾಗುತ್ತಿರುವುದು ಆತಂಕಕಾರಿ ವಿದ್ಯಮಾನ. ಪ್ರಭಾವಿ ವ್ಯಕ್ತಿಗಳು…
೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ…
ಜಿಪಿಎಸ್ ವಾಕಿಟಾಕಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ ಎಸ್ಒಪಿ ಬಿಡುಗಡೆ ಮಾಡಿದ ಸಚಿವ ಈಶ್ವರ್ ಖಂಡ್ರೆ ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆ…