ಮಂಡ್ಯ: ಕೃಷಿ ಪ್ರಧಾನ ಜಿಲ್ಲೆ ಹಾಗೂ ಸಕ್ಕರೆ ನಾಡು ಎಂದು ಕರೆಯಿಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 95 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ 2015 ಇಸವಿಯಿಂದ ಈಚೆಗೆ ಮಂಡ್ಯ ಜಿಲ್ಲೆಯಲ್ಲಿ ಅನ್ನದಾತರ ಆತ್ಮಹತ್ಯೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಸಾಲದ ಶೂಲಕ್ಕೆ ಸಿಲುಕಿ ರೈತರು ಸಾವೀಗೀಡಾಗುತ್ತಿದ್ದಾರೆ.
ಅನ್ನದಾತರ ಜೀವನ ಭದ್ರತೆ, ಕೃಷಿಯಲ್ಲಿನ ಸಮಸ್ಯೆಗಳು, ಕಬ್ಬು ಸೇರಿದಂತೆ ಅನೇಕ ಉತ್ಪನ್ನಗಳಿಗೆ ಬೆಂಬಲ ಬೆಲೆ, ವೈಜ್ಞಾನಿಕ ಬೆಲೆ ನಿಗದಿ ಸೇರಿದಂತೆ ಅನೇಕ ಸಮಸ್ಯೆಗಳಿಂದಲೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂಬ ವರದಿ ಬಹಿರಂಗವಾಗಿದೆ.
ಇದರ ಜೊತೆಗೆ ಅತಿವೃಷ್ಟಿ ಹಾಗೂ ಅನಾವೃಷ್ಟಿ ಸೇರಿದಂತೆ ಅನೇಕ ಸಮಸ್ಯೆ ಎದುರಿಸುತ್ತಿರುವ ರೈತರು, ಬೆಳೆ ನಾಶದಿಂದ ತೀವ್ರ ಕಂಗಾಲಾಗುತ್ತಿದ್ದಾರೆ.
ಇದರ ಜೊತೆಗೆ ನೀರು, ವಿದ್ಯುತ್ ಸಮಸ್ಯೆ, ಬೆಳೆಗಳಿಗೆ ಬೆಲೆ ಕುಸಿತ, ಹವಾಮಾನ ವೈಪರೀತ್ಯ, ರಸಗೊಬ್ಬರಗಳ ಬೆಲೆ ಏರಿಕೆ, ಮಾರುಕಟ್ಟೆಯಲ್ಲಿ ದಲ್ಲಾಳಿಗಳ ಹಾವಳಿ, ಮೈಕ್ರೋ ಫೈನಾನ್ಸ್ಗಳ ಕಿರುಕುಳ ಸೇರಿದಂತೆ ಹತ್ತಾರು ಕಾರಣಗಳಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…