ಮಂಡ್ಯ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾವನ್ನು ಅಕ್ಟೋಬರ್ 4 ರಿಂದ ಮೂರು ದಿನಗಳ ಕಾಲ ಅಥವಾ 5 ದಿನಗಳ ಕಾಲ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ದಸರಾದಲ್ಲಿ ಕಾರ್ಯಕ್ರಮಗಳು ಜನಾಕರ್ಷಿತವಾಗಿರಲಿ ಹಾಗೂ ಯಾವುದೇ ಲೋಪವಿಲ್ಲದಂತೆ ವಿಜೃಂಭಣೆಯಿಂದ ಆಚರಿಸಬೇಕು ಎಂದರು.
ವಿವಿಧ ಸಮಿತಿಗಳನ್ನು ರಚಿಸಿ ಯೋಜನೆಗಳನ್ನು ಸಿದ್ಧಪಡಿಸಿ ಉತ್ತಮವಾಗಿ ಕಾರ್ಯಕ್ರಮಗಳು ಮೂಡಿ ಬರಬೇಕು ಹಾಗೂ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಿ ಎಂದರು.
ಜಿಲ್ಲಾಧಿಕಾರಿ ಡಾ: ಕುಮಾರ ಮಾತನಾಡಿ, ದಸರಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಲು ಸ್ವಾಗತ, ವೇದಿಕೆ, ಸಾಂಸ್ಕೃತಿಕ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಕ್ರೀಡಾ, ಯೋಗ, ಮಕ್ಕಳ ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಸಭೆಯಲ್ಲಿ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಹೆಚ್. ಟಿ ಮಂಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…