ಮಂಡ್ಯ

ನಾಲೆಗಳಿಗೆ ನೀರು ಬಿಡುವ ಬಗ್ಗೆ 24 ಗಂಟೆಯೊಳಗೆ ತೀರ್ಮಾನಿಸಲಾಗುವುದು : ಕೃಷಿ ಸಚಿವ ಚಲುವರಾಯಸ್ವಾಮಿ

ಮಂಡ್ಯ : ಕೆ.ಆರ್.ಎಸ್. ವ್ಯಾಪ್ತಿಯ ರೈತರ ಹಿತದೃಷ್ಟಿಟ್ಟುಕೊಂಡು ಕೆಆರ್‌ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವ ಸಂಬಂಧ 24 ಗಂಟೆ ಅವಧಿಯೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಕಾವೇರಿ ಸಭಾಂಗಣದಲ್ಲಿ ಸೋಮವಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇಪ್ಪ, ಮಂಡ್ಯ ಮತ್ತು ಮೈಸೂರು ಜಿಲ್ಲೆಯ ಶಾಸಕರೊಂದಿಗೆ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಜನ-ಜಾನುವಾರುಗಳು ಹಾಗೂ ರೈತರ ಹಿತ ಕಾಯಲಾಗುವುದು ಎಂದರು.

ಅರೆ ನೀರಾವರಿ ಕೃಷಿ ಪದ್ಧತಿ ಅನಿವಾರ್ಯ : ಕೆಆರ್‌ಎಸ್ ಜಲಾಶಯದಲ್ಲಿ ಪ್ರಸ್ತುತ 113 ಅಡಿ ನೀರು ಸಂಗ್ರಹವಾಗಿದೆ. ಈಗಿನ ಜಲಾಶಯ ಸ್ಥಿತಿ ಅವಲೋಕನ ಮಾಡಿದರೆ ಈ ವರ್ಷ ಅರೆ ನೀರಾವರಿ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಅನಿವರ‍್ಯತೆ ಕಾಣುತ್ತಿದೆ. ಇಂತಹ ಸಂಕಷ್ಟ ಸ್ಥಿತಿಯನ್ನು ಈಗಾಗಾಲೇ ನಾವು ಎದುರಿಸಿದ್ದೇವೆ. ಇದು ರಾಜ್ಯದ ರೈತರಿಗೂ ತಿಳಿದಿದೆ ಎಂದರು.

ಮಂಡ್ಯ, ಮೈಸೂರು, ಬೆಂಗಳೂರು ಜಿಲ್ಲೆಗಳಿಗೆ ಕುಡಿಯುವ ನೀರು, ಬೆಳೆದು ನಿಂತಿರುವ ಬೆಳೆ ರಕ್ಷಣೆ, ಕೆರೆಗಳಿಗೆ ನೀರು ಹರಿಸುವ ಸಂಬಂಧ, ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ನ ತೀರ್ಮಾನಗಳು ಇತರೆ ಸಾಧಕ, ಬಾಧಕಗಳ ಕುರಿತು ಎಲ್ಲರೂ ಸುದೀರ್ಘ ಚರ್ಚೆ ನಡೆದ್ದೇವೆ. ಸದ್ಯಕ್ಕೆ ನಮ್ಮ ರೈತರನ್ನು ಉಳಿಸುವ ಪ್ರಯತ್ನವನ್ನಂತೂ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಮತ್ತು ನೀರಾವರಿ ಸಚಿವರೂ ಆದ ಡಿ.ಕೆ ಶಿವಕುಮಾರ್ ಅವರ ಜತೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಸಂಪೂರ್ಣ ಮಾಹಿತಿ ಕೊಡಲು ಸೂಚನೆ : ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದ ನಂತರ ನೂತನ ಐಸಿಸಿ ಸಮಿತಿಯನ್ನು ಮುಖ್ಯಮಂತ್ರಿಗಳು ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ. ಮೈಸೂರು, ಮಂಡ್ಯ ಜಿಲ್ಲೆಯ ಅಣೆಕಟ್ಟೆ ನಾಲೆಗಳು ಹಾಗೂ ವಿಶ್ವೇಶ್ವರಯ್ಯ ನಾಲೆ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿವೆ. ಹಾಗಾಗಿ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಡನೆ ಮೈಸೂರು ಜಿಲ್ಲೆ ಉಸ್ತುವಾರಿ ಮಂತ್ರಿ ಎಚ್.ಸಿ ಮಹದೇವಪ್ಪ ಹಾಗೂ ನಾನು ಸಭೆ ನಡೆಸಿದ್ದೇವೆ. ಎರಡೂ ಜಿಲ್ಲೆಯ ಶಾಸಕರು ಹಲವು ಸಮಸ್ಯೆ ಹೇಳಿದ್ದಾರೆ. ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ಒಣ ಭೂಮಿಗೆ ಸದಾ ನೀರು ಹೋಗಲಿಕ್ಕೆ ಅನೇಕ ತೊಂದರೆಗಳಿವೆ. ಎಲ್ಲಿ ನಾಲೆಗಳು ದುರಸ್ಥಿಯಲ್ಲಿವೆ, ಎಲ್ಲಿ ನಾಲೆಗಳಲ್ಲಿ ಹೂಳು ತುಂಬಿಕೊಂಡಿದೆ, ಕೊನೆಯ ಭಾಗಕ್ಕೆ ಏಕೆ ನೀರು ಹರಿಯುತ್ತಿಲ್ಲ ಎಂಬುದರ ಕುರಿತು ನೀರಾವರಿ ಇಲಾಖೆ ಅಧಿಕಾರಿಗಳು ಸಂಪೂರ್ಣ ಮಾಹಿತಿ ಕೊಡುವಂತೆ ಸೂಚಿಸಿದ್ದೇವೆ ಎಂದು ಹೇಳಿದರು.

ಇದಕ್ಕೂ ಮೊದಲು ಕಾವೇರಿ ನೀರಾವರಿ ನಿಗಮ ಸೂಪರಿಂಟೆಂಡೆಂಟ್ ಇಂಜಿನಿಯರ್ ರಘುರಾಮ್ ಕೆಆರ್‌ಎಸ್ ಜಲಾಶಯದಲ್ಲಿ 113 ಅಡಿ ನೀರು ಸಂಗ್ರಹವಾಗಿದೆ. ಇನ್ನೂ 20 ಟಿಎಂಸಿ ನೀರು ಹರಿದು ಬಂದರೆ ಆನ್ ಅಂಡ್ ಆಫ್ ಪದ್ಧತಿಯಲ್ಲಿ ಜಲಾಶಯ ವ್ಯಾಪ್ತಿಯ ಎಲ್ಲ ನಾಲೆಗಳಿಗೆ ನೀರು ಹರಿಸಬಹುದು. 15 ದಿನ ನೀರು ಹರಿಸಿ, 15 ದಿನ ನಿಲ್ಲಿಸಬಹುದು. ಡಿಸೆಂಬರ್‌ವರೆಗೆ ನಾಲೆಗಳಿಗೆ ನೀರು ಹರಿಸುವ ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕರಾದ ಜಿ.ಟಿ ದೇವೇಗೌಡ, ಪಿ.ಎಂ.ನರೇಂದ್ರಸ್ವಾಮಿ, ಎ.ಬಿ. ರಮೇಶ್ ಬಾಬು ಬಂಡಿಸಿದ್ದೇಗೌಡ, ಕೆ.ಎಂ.ಉದಯ್, ಎಚ್.ಟಿ. ಮಂಜು, ರವಿಕುಮಾರ್ ಗಣಿಗ, ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ಮರಿತಿಬ್ಬೇಗೌಡ, ಜಿಲ್ಲಾಧಿಕಾರಿಗಳಾದ ಡಾ.ಕುಮಾರ, ರಾಜೇಂದ್ರ, ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ವೆಂಕಟೇಶ್, ಎಇಇ ಎ.ಜಯಂತ್, ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ಯತೀಶ್, ಸೀಮಾ ಇತರರು ಭಾಗವಹಿಸಿದ್ದರು.

lokesh

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

2 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

2 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

2 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

2 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

2 hours ago