ಮಂಡ್ಯ

ನಾಲೆಗಳಿಗೆ ನೀರು ಬಿಡುವ ಬಗ್ಗೆ 24 ಗಂಟೆಯೊಳಗೆ ತೀರ್ಮಾನಿಸಲಾಗುವುದು : ಕೃಷಿ ಸಚಿವ ಚಲುವರಾಯಸ್ವಾಮಿ

ಮಂಡ್ಯ : ಕೆ.ಆರ್.ಎಸ್. ವ್ಯಾಪ್ತಿಯ ರೈತರ ಹಿತದೃಷ್ಟಿಟ್ಟುಕೊಂಡು ಕೆಆರ್‌ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವ ಸಂಬಂಧ 24 ಗಂಟೆ ಅವಧಿಯೊಳಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಕಾವೇರಿ ಸಭಾಂಗಣದಲ್ಲಿ ಸೋಮವಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇಪ್ಪ, ಮಂಡ್ಯ ಮತ್ತು ಮೈಸೂರು ಜಿಲ್ಲೆಯ ಶಾಸಕರೊಂದಿಗೆ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಜನ-ಜಾನುವಾರುಗಳು ಹಾಗೂ ರೈತರ ಹಿತ ಕಾಯಲಾಗುವುದು ಎಂದರು.

ಅರೆ ನೀರಾವರಿ ಕೃಷಿ ಪದ್ಧತಿ ಅನಿವಾರ್ಯ : ಕೆಆರ್‌ಎಸ್ ಜಲಾಶಯದಲ್ಲಿ ಪ್ರಸ್ತುತ 113 ಅಡಿ ನೀರು ಸಂಗ್ರಹವಾಗಿದೆ. ಈಗಿನ ಜಲಾಶಯ ಸ್ಥಿತಿ ಅವಲೋಕನ ಮಾಡಿದರೆ ಈ ವರ್ಷ ಅರೆ ನೀರಾವರಿ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಅನಿವರ‍್ಯತೆ ಕಾಣುತ್ತಿದೆ. ಇಂತಹ ಸಂಕಷ್ಟ ಸ್ಥಿತಿಯನ್ನು ಈಗಾಗಾಲೇ ನಾವು ಎದುರಿಸಿದ್ದೇವೆ. ಇದು ರಾಜ್ಯದ ರೈತರಿಗೂ ತಿಳಿದಿದೆ ಎಂದರು.

ಮಂಡ್ಯ, ಮೈಸೂರು, ಬೆಂಗಳೂರು ಜಿಲ್ಲೆಗಳಿಗೆ ಕುಡಿಯುವ ನೀರು, ಬೆಳೆದು ನಿಂತಿರುವ ಬೆಳೆ ರಕ್ಷಣೆ, ಕೆರೆಗಳಿಗೆ ನೀರು ಹರಿಸುವ ಸಂಬಂಧ, ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ನ ತೀರ್ಮಾನಗಳು ಇತರೆ ಸಾಧಕ, ಬಾಧಕಗಳ ಕುರಿತು ಎಲ್ಲರೂ ಸುದೀರ್ಘ ಚರ್ಚೆ ನಡೆದ್ದೇವೆ. ಸದ್ಯಕ್ಕೆ ನಮ್ಮ ರೈತರನ್ನು ಉಳಿಸುವ ಪ್ರಯತ್ನವನ್ನಂತೂ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಮತ್ತು ನೀರಾವರಿ ಸಚಿವರೂ ಆದ ಡಿ.ಕೆ ಶಿವಕುಮಾರ್ ಅವರ ಜತೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಸಂಪೂರ್ಣ ಮಾಹಿತಿ ಕೊಡಲು ಸೂಚನೆ : ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದ ನಂತರ ನೂತನ ಐಸಿಸಿ ಸಮಿತಿಯನ್ನು ಮುಖ್ಯಮಂತ್ರಿಗಳು ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ. ಮೈಸೂರು, ಮಂಡ್ಯ ಜಿಲ್ಲೆಯ ಅಣೆಕಟ್ಟೆ ನಾಲೆಗಳು ಹಾಗೂ ವಿಶ್ವೇಶ್ವರಯ್ಯ ನಾಲೆ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿವೆ. ಹಾಗಾಗಿ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಡನೆ ಮೈಸೂರು ಜಿಲ್ಲೆ ಉಸ್ತುವಾರಿ ಮಂತ್ರಿ ಎಚ್.ಸಿ ಮಹದೇವಪ್ಪ ಹಾಗೂ ನಾನು ಸಭೆ ನಡೆಸಿದ್ದೇವೆ. ಎರಡೂ ಜಿಲ್ಲೆಯ ಶಾಸಕರು ಹಲವು ಸಮಸ್ಯೆ ಹೇಳಿದ್ದಾರೆ. ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ಒಣ ಭೂಮಿಗೆ ಸದಾ ನೀರು ಹೋಗಲಿಕ್ಕೆ ಅನೇಕ ತೊಂದರೆಗಳಿವೆ. ಎಲ್ಲಿ ನಾಲೆಗಳು ದುರಸ್ಥಿಯಲ್ಲಿವೆ, ಎಲ್ಲಿ ನಾಲೆಗಳಲ್ಲಿ ಹೂಳು ತುಂಬಿಕೊಂಡಿದೆ, ಕೊನೆಯ ಭಾಗಕ್ಕೆ ಏಕೆ ನೀರು ಹರಿಯುತ್ತಿಲ್ಲ ಎಂಬುದರ ಕುರಿತು ನೀರಾವರಿ ಇಲಾಖೆ ಅಧಿಕಾರಿಗಳು ಸಂಪೂರ್ಣ ಮಾಹಿತಿ ಕೊಡುವಂತೆ ಸೂಚಿಸಿದ್ದೇವೆ ಎಂದು ಹೇಳಿದರು.

ಇದಕ್ಕೂ ಮೊದಲು ಕಾವೇರಿ ನೀರಾವರಿ ನಿಗಮ ಸೂಪರಿಂಟೆಂಡೆಂಟ್ ಇಂಜಿನಿಯರ್ ರಘುರಾಮ್ ಕೆಆರ್‌ಎಸ್ ಜಲಾಶಯದಲ್ಲಿ 113 ಅಡಿ ನೀರು ಸಂಗ್ರಹವಾಗಿದೆ. ಇನ್ನೂ 20 ಟಿಎಂಸಿ ನೀರು ಹರಿದು ಬಂದರೆ ಆನ್ ಅಂಡ್ ಆಫ್ ಪದ್ಧತಿಯಲ್ಲಿ ಜಲಾಶಯ ವ್ಯಾಪ್ತಿಯ ಎಲ್ಲ ನಾಲೆಗಳಿಗೆ ನೀರು ಹರಿಸಬಹುದು. 15 ದಿನ ನೀರು ಹರಿಸಿ, 15 ದಿನ ನಿಲ್ಲಿಸಬಹುದು. ಡಿಸೆಂಬರ್‌ವರೆಗೆ ನಾಲೆಗಳಿಗೆ ನೀರು ಹರಿಸುವ ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕರಾದ ಜಿ.ಟಿ ದೇವೇಗೌಡ, ಪಿ.ಎಂ.ನರೇಂದ್ರಸ್ವಾಮಿ, ಎ.ಬಿ. ರಮೇಶ್ ಬಾಬು ಬಂಡಿಸಿದ್ದೇಗೌಡ, ಕೆ.ಎಂ.ಉದಯ್, ಎಚ್.ಟಿ. ಮಂಜು, ರವಿಕುಮಾರ್ ಗಣಿಗ, ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ಮರಿತಿಬ್ಬೇಗೌಡ, ಜಿಲ್ಲಾಧಿಕಾರಿಗಳಾದ ಡಾ.ಕುಮಾರ, ರಾಜೇಂದ್ರ, ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ವೆಂಕಟೇಶ್, ಎಇಇ ಎ.ಜಯಂತ್, ಪೊಲೀಸ್ ವರಿಷ್ಠಾಧಿಕಾರಿಗಳಾದ ಎನ್.ಯತೀಶ್, ಸೀಮಾ ಇತರರು ಭಾಗವಹಿಸಿದ್ದರು.

lokesh

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

2 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

18 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

19 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

20 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

21 hours ago