ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೀನಾ ಎಂಬ ಮಹಿಳೆಯು ಸಿಎಂ ಸಿದ್ದರಾಮಯ್ಯ ಅವರ ಎರಡನೇ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ದಯಾಮರಣ ನಿಡುವಂತೆ ಮನವಿ ಮಾಡಿದ ಪ್ರಸಂಗ ನಡೆಯಿತು.
ಇಂದು ವಿಧಾನಸೌಧ ಆವರಣದಲ್ಲಿ ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದ ಮಂಡ್ಯ ಮೂಲದ ಅಂಗವಿಕಲ ಮಹಿಳೆಯೊಬ್ಬರು ತಮ್ಮ ಕಷ್ಟಗಳಿಂದ ಶಾಸ್ವತ ಪರಿಹಾರಕ್ಕಾಗಿ ಜನ ಸ್ಪಂದನಾ ಕಾರ್ಯಕ್ರಮಲ್ಲಿ ಭಾಗಿಯಾಗಿದ್ದರು.
ನಾನು ಅಂಗವಿಕಲೆ ನನಗೆ ಯಾರೂ ಕೆಲಸ ಕೊಡುತ್ತಿಲ್ಲ. ನನ್ನ ಪತಿ ಕೋವಿಡ್ಗೆ ಬಲಿಯಾದರು. ನನ್ನ ಮಗನ ಓದಿಗೆ ಕಷ್ಟ ಆಗುತ್ತಿದ್ದು, ನಮಿಬ್ಬರಿಗೂ ದಯಾಮರಣ ಕೇಳಲು ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿರುವುದಾಗಿ ನೊಂದ ಮಹಿಲೆ ಹೇಳಿರುವುದಾಗಿ ಖಾಸಗಿ ವಾಹಿನಿ ಟಿವಿ-9 ವರದಿ ಮಾಡಿದೆ.
ಮೂರು ವರ್ಷಗಳ ಹಿಂದೆ ನನ್ನ ಗಂಡ ಕೋವಿಡ್ನಿಂದ ಮೃತಪಟ್ಟಿದ್ದಾರೆ. ನನಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ನಾನು ಕೂಡ ಅಂಗವಿಕಲೆ. ನಾನು ಅಂಗವಿಕಲೆ ಎಂದು ಯಾರೂ ಕೆಲಸ ಕೊಡುತ್ತಿಲ್ಲ. ನನ್ನ ಮಗನ ಓದಿಗಾಗಿ ಸಹಾಯ ಮಾಡಬೇಕು. ನಾನು ಕೆಲಸ ಕೇಳಿದರೆ ನನ್ನನ್ನ ಕೆಟ್ಟದಾಗಿ ಬಳಸಿಕೊಳ್ಳಲು ಪ್ರಯತ್ನ ಮಾಡುತ್ತಾರೆ. ಹೀಗಾಗಿ ನಮಗೆ ದಯಾಮರಣ ಕೊಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಶ್ರೀರಂಗಪಟ್ಟಣದ ಶಾಸಕರ ಬಳಿ 2 ಬಾರಿ ಸಮಸ್ಯೆ ಕೇಳಿಕೊಂಡಿದ್ದೇನೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ನನ್ನ ಗಂಡ ಕೋವಿಡ್ನಿಂದ ಮೃತಪಟ್ಟಾಗ ಅಂಬರೀಶ್ ಅವರ ಮಗ ಮನೆಗೆ ಬಂದು ಸಹಾಯ ಮಾಡುವುದಾಗಿ ಹೇಳಿದ್ದರು. ಅವರು ಕೂಡ ಸಹಾಯ ಮಾಡಲಿಲ್ಲ ಎಂದು ಮೀನಾ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಬೆಂಗಳೂರು : ನಾಯಕ ರಜತ್ ಪಾಟೀದಾರ್, ಟಿಮ್ ಡೇವಿಡ್, ದೇವ್ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್…
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…