ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೀನಾ ಎಂಬ ಮಹಿಳೆಯು ಸಿಎಂ ಸಿದ್ದರಾಮಯ್ಯ ಅವರ ಎರಡನೇ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ದಯಾಮರಣ ನಿಡುವಂತೆ ಮನವಿ ಮಾಡಿದ ಪ್ರಸಂಗ ನಡೆಯಿತು.
ಇಂದು ವಿಧಾನಸೌಧ ಆವರಣದಲ್ಲಿ ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದ ಮಂಡ್ಯ ಮೂಲದ ಅಂಗವಿಕಲ ಮಹಿಳೆಯೊಬ್ಬರು ತಮ್ಮ ಕಷ್ಟಗಳಿಂದ ಶಾಸ್ವತ ಪರಿಹಾರಕ್ಕಾಗಿ ಜನ ಸ್ಪಂದನಾ ಕಾರ್ಯಕ್ರಮಲ್ಲಿ ಭಾಗಿಯಾಗಿದ್ದರು.
ನಾನು ಅಂಗವಿಕಲೆ ನನಗೆ ಯಾರೂ ಕೆಲಸ ಕೊಡುತ್ತಿಲ್ಲ. ನನ್ನ ಪತಿ ಕೋವಿಡ್ಗೆ ಬಲಿಯಾದರು. ನನ್ನ ಮಗನ ಓದಿಗೆ ಕಷ್ಟ ಆಗುತ್ತಿದ್ದು, ನಮಿಬ್ಬರಿಗೂ ದಯಾಮರಣ ಕೇಳಲು ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿರುವುದಾಗಿ ನೊಂದ ಮಹಿಲೆ ಹೇಳಿರುವುದಾಗಿ ಖಾಸಗಿ ವಾಹಿನಿ ಟಿವಿ-9 ವರದಿ ಮಾಡಿದೆ.
ಮೂರು ವರ್ಷಗಳ ಹಿಂದೆ ನನ್ನ ಗಂಡ ಕೋವಿಡ್ನಿಂದ ಮೃತಪಟ್ಟಿದ್ದಾರೆ. ನನಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ನಾನು ಕೂಡ ಅಂಗವಿಕಲೆ. ನಾನು ಅಂಗವಿಕಲೆ ಎಂದು ಯಾರೂ ಕೆಲಸ ಕೊಡುತ್ತಿಲ್ಲ. ನನ್ನ ಮಗನ ಓದಿಗಾಗಿ ಸಹಾಯ ಮಾಡಬೇಕು. ನಾನು ಕೆಲಸ ಕೇಳಿದರೆ ನನ್ನನ್ನ ಕೆಟ್ಟದಾಗಿ ಬಳಸಿಕೊಳ್ಳಲು ಪ್ರಯತ್ನ ಮಾಡುತ್ತಾರೆ. ಹೀಗಾಗಿ ನಮಗೆ ದಯಾಮರಣ ಕೊಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಶ್ರೀರಂಗಪಟ್ಟಣದ ಶಾಸಕರ ಬಳಿ 2 ಬಾರಿ ಸಮಸ್ಯೆ ಕೇಳಿಕೊಂಡಿದ್ದೇನೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ನನ್ನ ಗಂಡ ಕೋವಿಡ್ನಿಂದ ಮೃತಪಟ್ಟಾಗ ಅಂಬರೀಶ್ ಅವರ ಮಗ ಮನೆಗೆ ಬಂದು ಸಹಾಯ ಮಾಡುವುದಾಗಿ ಹೇಳಿದ್ದರು. ಅವರು ಕೂಡ ಸಹಾಯ ಮಾಡಲಿಲ್ಲ ಎಂದು ಮೀನಾ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಬೆಂಗಳೂರು: ಕಾಂಗ್ರೆಸ್ನಲ್ಲಿ ಡ್ರೈವರ್ ಬದಲಾಗಿದ್ದಾರೆ ಅಷ್ಟೇ. ಬಸ್, ಎಂಜಿನ್ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಈ…
ಮಡಿಕೇರಿ: ತಾಲ್ಲೂಕಿನ ಕತ್ತಲೆಕಾಡು ಗ್ರಾಮದಲ್ಲಿ ವನ್ಯಪ್ರಾಣಿ ದಾಳಿಗೆ ಜಾನುವಾರು ಬಲಿಯಾಗಿದ್ದು, ಹುಲಿ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮದ ಆನಂದ…
ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಈ…
ನವದೆಹಲಿ: ಕಾಂಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ ಜೂನ್.6ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಿಂಗಳಿಗೆ 3000 ರೂ ಸಂಬಳಕ್ಕೆ ಮನೆಗೆಲಸ ಮಾಡುತ್ತಿದ್ದ ಕಲಿತಾ ಮಾಝಿ ಅವರು ಶಾಸಕಿಯಾಗಿ ಆಯ್ಕೆಯಾಗಿ, ಸಚಿವೆಯಾಗಿ…
ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ…