ಮಂಡ್ಯ

ಜನಸ್ಪಂದನ ಕಾರ್ಯಕ್ರಮದಲ್ಲಿ ದಯಾಮರಣ ಕೋರಿದ ಮಂಡ್ಯದ ಅಂಗವಿಕಲ ಮಹಿಳೆ

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೀನಾ ಎಂಬ ಮಹಿಳೆಯು ಸಿಎಂ ಸಿದ್ದರಾಮಯ್ಯ ಅವರ ಎರಡನೇ ಜನ ಸ್ಪಂದನಾ ಕಾರ್ಯಕ್ರಮದಲ್ಲಿ ದಯಾಮರಣ ನಿಡುವಂತೆ ಮನವಿ ಮಾಡಿದ ಪ್ರಸಂಗ ನಡೆಯಿತು.

ಇಂದು ವಿಧಾನಸೌಧ ಆವರಣದಲ್ಲಿ ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿದ್ದ ಮಂಡ್ಯ ಮೂಲದ ಅಂಗವಿಕಲ ಮಹಿಳೆಯೊಬ್ಬರು ತಮ್ಮ ಕಷ್ಟಗಳಿಂದ ಶಾಸ್ವತ ಪರಿಹಾರಕ್ಕಾಗಿ ಜನ ಸ್ಪಂದನಾ ಕಾರ್ಯಕ್ರಮಲ್ಲಿ ಭಾಗಿಯಾಗಿದ್ದರು.

ನಾನು ಅಂಗವಿಕಲೆ ನನಗೆ ಯಾರೂ ಕೆಲಸ ಕೊಡುತ್ತಿಲ್ಲ. ನನ್ನ ಪತಿ ಕೋವಿಡ್​ಗೆ ಬಲಿಯಾದರು. ನನ್ನ ಮಗನ ಓದಿಗೆ ಕಷ್ಟ ಆಗುತ್ತಿದ್ದು, ನಮಿಬ್ಬರಿಗೂ ದಯಾಮರಣ ಕೇಳಲು ಜನಸ್ಪಂದನ ಕಾರ್ಯಕ್ರಮಕ್ಕೆ ಬಂದಿರುವುದಾಗಿ ನೊಂದ ಮಹಿಲೆ ಹೇಳಿರುವುದಾಗಿ ಖಾಸಗಿ ವಾಹಿನಿ ಟಿವಿ-9 ವರದಿ ಮಾಡಿದೆ.

ಮೂರು ವರ್ಷಗಳ ಹಿಂದೆ ನನ್ನ ಗಂಡ ಕೋವಿಡ್​ನಿಂದ ಮೃತಪಟ್ಟಿದ್ದಾರೆ. ನನಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ನಾನು ಕೂಡ ಅಂಗವಿಕಲೆ. ನಾನು ಅಂಗವಿಕಲೆ ಎಂದು ಯಾರೂ ಕೆಲಸ ಕೊಡುತ್ತಿಲ್ಲ. ನನ್ನ ಮಗನ ಓದಿಗಾಗಿ ಸಹಾಯ ಮಾಡಬೇಕು. ನಾನು ಕೆಲಸ ಕೇಳಿದರೆ ನನ್ನನ್ನ ಕೆಟ್ಟದಾಗಿ ಬಳಸಿಕೊಳ್ಳಲು ಪ್ರಯತ್ನ ಮಾಡುತ್ತಾರೆ. ಹೀಗಾಗಿ ನಮಗೆ ದಯಾಮರಣ ಕೊಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಶ್ರೀರಂಗಪಟ್ಟಣದ ಶಾಸಕರ ಬಳಿ 2 ಬಾರಿ ಸಮಸ್ಯೆ ಕೇಳಿಕೊಂಡಿದ್ದೇನೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ನನ್ನ ಗಂಡ ಕೋವಿಡ್​ನಿಂದ ಮೃತಪಟ್ಟಾಗ ಅಂಬರೀಶ್ ಅವರ ಮಗ ಮನೆಗೆ ಬಂದು ಸಹಾಯ ಮಾಡುವುದಾಗಿ ಹೇಳಿದ್ದರು. ಅವರು ಕೂಡ ಸಹಾಯ ಮಾಡಲಿಲ್ಲ ಎಂದು ಮೀನಾ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

andolanait

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

20 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

23 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

23 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

23 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

23 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

23 hours ago