ಮಂಡ್ಯ

ಬಲೆಗೆ ಬಿದ್ದ ಬಂಗಾರ ಬಣ್ಣದ ಮೀನು

ಕೆ.ಆರ್.ಪೇಟೆ : ಪಟ್ಟಣದ ದೇವಿರಮ್ಮಣ್ಣಿ ಕೆರೆಯಲ್ಲಿ ಸೋಮವಾರ ಮುಂಜಾನೆ ಮೀನು ಹಿಡಿಯಲು ಹೋದ ಮೀನುಗಾರ ರಾಮಚಂದ್ರನಾಯಕ ಎಂಬವರ ಬಲೆಗೆ ಅಪರೂಪದ ಬಂಗಾರದ ಬಣ್ಣದ ಮೀನು ಸಿಕ್ಕಿದೆ.

ವಿಷಯ ತಿಳಿಯುತ್ತಲೇ ಸುತ್ತಮುತ್ತಲ ಜನತೆ ಮೀನನ್ನು ನೋಡಲು ಮುಗಿಬಿದ್ದರು. ಈ ಬಂಗಾರದ ಬಣ್ಣದ ಮೀನು ನಾಲ್ಕು ಕೆ.ಜಿ. ತೂಕವಿದ್ದು, ಇದನ್ನು ಗೌರಿ ಮೀನು ಎನ್ನಲಾಗುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದೊಂದು ಅಪರೂಪದ ತಳಿಯಾಗಿದ್ದು, ವಳಗೆರೆ ಮೆಣಸ ಗ್ರಾಮದ ರಾಜು ಎಂಬವರು ನಾಲ್ಕು ಕೆ.ಜಿ. ತೂಕವಿದ್ದ ಗೌರಿ ಮೀನನ್ನು ಒಂದು ಸಾವಿರ ರೂ. ನೀಡಿ ಖರೀದಿಸಿದ್ದಾರೆ. ಬಂಗಾರ ಬಣ್ಣದ ಗೌರಿ ಮೀನು ಮುಳ್ಳುಗಳಿಲ್ಲದೆ ತಿನ್ನಲು ರುಚಿಕರವಾದ ಸ್ವಾದಿಷ್ಟವಾಗಿದೆ. ಈ ಮೀನಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇದೆ ಎಂದು ಮೀನು ಮಾರಾಟಗಾರ ಬಲೆ ರಾಮು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

1 hour ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

1 hour ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

1 hour ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

2 hours ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

11 hours ago