Mysore
24
clear sky

Social Media

ಬುಧವಾರ, 17 ಡಿಸೆಂಬರ್ 2025
Light
Dark

ಶಿಂಷಾ ನದಿಯಲ್ಲಿ ಬೀಡುಬಿಟ್ಟ ಕಾಡಾನೆಗಳ ಹಿಂಡು

ಮಂಡ್ಯ : ಕಾಡಿನಿಂದ ನಾಡಿಗೆ ಲಗ್ಗೆ ಇಟ್ಟಿರುವ ಕಾಡಾನೆಗಳು ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಶಿಂಷಾ ನದಿಯಲ್ಲಿ ಬೀಡುಬಿಟ್ಟಿವೆ.

ಮದ್ದೂರಿನಲ್ಲಿ ನೆನ್ನೆಯಷ್ಟೆ ಹೊಳೆ ಆಂಜನೇಯ ದೇವಸ್ಥಾನದ ಬಳಿ 9 ಆನೆಗಳ ಗುಂಪು ಪ್ರತ್ಯಕ್ಷದ ಬಳಿಕ ನಾಲ್ಕು ಆನೆಗಳ ಮತ್ತೊಂದು ಗುಂಪು ಕಾಣಿಸಿಕೊಂಡಿದ್ದು, ನಾಲ್ಕು ಆನೆಗಳು ಇರುವ ತಂಡ ನೀರಿನಲ್ಲಿ ಆಟವಾಡುತ್ತಿವೆ.

ಕಾಡಿಗೆ ಆನೆಗಳನ್ನು ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಸ್ಥಳದಲ್ಲೇ ಅಧಿಕಾರಿಗಳು ಠಿಕಾಣಿ ಹೂಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.

ಆನೆಗಳ ನೋಡಲು ಸುತ್ತಮುತ್ತಲಿನ ಗ್ರಾಮದ ಜನರು ಮುಗಿಬೀಳುತ್ತಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!