ಮಂಡ್ಯ: ರಾಜಮಾತೆ ಕೆಂಪನಂಜಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ನಡೆದ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.
ಸಾಹಿತ್ಯ ಸಮ್ಮೇಳನದ ಇತಿಹಾಸದ ಪುಟದಲ್ಲಿ ಇದೇ ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿಗೆ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಕ್ಷಿಯಾಯಿತು.
ಪ್ರಾಧ್ಯಪಕ ಡಾ. ಶಿವರಾಜ ಶಾಸ್ತ್ರಿ ಹೇರೂರ ಅವರ ಅಧ್ಯಕ್ಷತೆಯಲ್ಲಿ ಆಶಯ ನುಡಿಗಳನ್ನಾಡಿದ ಸಾಹಿತಿ ಮುದಿಗೆರೆ ರಮೇಶ್ ಕುಮಾರ್ ಅವರು, ನಮ್ಮ ಬದುಕೇ ಒಂದು ಸವಾಲು ಅದರಲ್ಲೂ ಕಾವ್ಯ ಕಟ್ಟುವುದೇ ಸವಾಲು. ಸವಾಲಿನ ಬದುಕಿನಲ್ಲಿ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದೇವೆ. ಬದುಕಿಗಿಂತ ಬರಹ ಮುಖ್ಯ. ದೃಷ್ಟಿ ವಿಶೇಷಚೇತನರ ಕವಿಗೋಷ್ಠಿ ಆಯೋಜಿಸುವ ಮೂಲಕ ಸಾಹಿತ್ಯ ಪರಿಷತ್ತು ಐತಿಹಾಸಿಕ ಕಾರ್ಯಕ್ಕೆ ಮುನ್ನುಡಿ ಬರೆದಿದ್ದು ಮುಂದಿನ ದಿನಗಳಲ್ಲಿ ದೃಷ್ಟಿ ವಿಶೇಷಚೇತನರ ಕೃತಿಗಳನ್ನು ಚಿಂತನೆಗೆ ಒಳಪಡಿಸುವ ಕಾರ್ಯವಾಗಲಿ ಎಂದರು.
ಈ ಸಂದರ್ಭದಲ್ಲಿ ನಾಲ್ವರನ್ನು ನಾವು ನೆನೆಯಬೇಕು. ಬರಗೂರು ರಾಮಚಂದ್ರಪ್ಪ ಅವರು ಅಂಧರ ಕವಿಗೋಷ್ಠಿಗೆ ಮುನ್ನುಡಿ ಬರೆದರು. ಸಿದ್ದಲಿಂಗಯ್ಯ ಅವರು 50 ಕೃತಿಗಳನ್ನು ಬ್ರೈಲಿ ಲಿಪಿಯಲ್ಲಿ ಮುದ್ರಿಸಿದರು. ಎಚ್.ವಿಶ್ವನಾಥ್ ಅವರು ದತ್ತಿ ಪ್ರಶಸ್ತಿ ಆರಂಭಿಸಿ ದೃಷ್ಟಿ ಚೇತನರಿಗೆ ಪ್ರಶಸ್ತಿ ನೀಡಿದರು. ಈಗ ನಾಡೋಜ ಡಾ. ಮಹೇಶ್ ಜೋಶಿ ಅವರು ದಾಖಲಾರ್ಹವಾದ ಐತಿಹಾಸಿಕ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದರು.
ನಂತರ ಅವರು ವಾಚಿಸಿದ ಆತ್ಮದ ಹಾಡು ಕವನಕ್ಕೆ ನೆರೆದಿದ್ದ ಪ್ರೇಕ್ಷಕರು ಚಪ್ಪಾಳೆಯ ಸುರಿಮಳೆ ಹರಿಸಿದರು. ಬಳಿಕ ಬಾಪು ಖಾಡೆ, ಹರೀಶ್ ಸಿ, ಹೇಮಂತ ಕುಮಾರ್, ಜಯನಂದಾ ಟೋಪುಗೋಳು, ರಮಾ ಫಣಿಭಟ್ ಗೋಪಿ, ಸೋಮಶೇಖರ್ ಬಳೆಗಾರ್, ಶಿವಸ್ವಾಮಿ ಚೀನಕೇರ, ಟಿ. ಎಂ. ತೋಟಯ್ಯ, ಡಾ. ಕೃಷ್ಣ ಹೊಂಬಾಳ, ಡಾ. ಆನಂದ್ ಇಂದೂರಾ ಅವರು ಕವನ ವಾಚಿಸಿದರು.
ಬೆಂಗಳೂರು: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು…
ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ ಅವರು ಇಂದು ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆ 2026ನ್ನು ಮಂಡಿಸಿದರು. ಈ ಪ್ರಸ್ತಾವನೆಯು…
ಚೆನ್ನೈ: ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು,…
ಬೆಂಗಳೂರು: ರಾಜ್ಯದಲ್ಲಿ ರಣ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಜನರು ಬಿಸಿಲ…
ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…
ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…