ಮಂಡ್ಯ

ದೃಷ್ಟಿಚೇತನರ ವಿಶೇಷ ಕವಿಗೋಷ್ಠಿಗೆ ಸಾಕ್ಷಿಯಾದ ಸಾಹಿತ್ಯ ಸಮ್ಮೇಳನ

ಮಂಡ್ಯ: ರಾಜಮಾತೆ ಕೆಂಪನಂಜಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ನಡೆದ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.

ಸಾಹಿತ್ಯ ಸಮ್ಮೇಳನದ ಇತಿಹಾಸದ ಪುಟದಲ್ಲಿ ಇದೇ ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿಗೆ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಕ್ಷಿಯಾಯಿತು.

ಪ್ರಾಧ್ಯಪಕ ಡಾ. ಶಿವರಾಜ ಶಾಸ್ತ್ರಿ ಹೇರೂರ ಅವರ ಅಧ್ಯಕ್ಷತೆಯಲ್ಲಿ ಆಶಯ ನುಡಿಗಳನ್ನಾಡಿದ ಸಾಹಿತಿ ಮುದಿಗೆರೆ ರಮೇಶ್ ಕುಮಾರ್ ಅವರು, ನಮ್ಮ ಬದುಕೇ ಒಂದು ಸವಾಲು ಅದರಲ್ಲೂ ಕಾವ್ಯ ಕಟ್ಟುವುದೇ ಸವಾಲು. ಸವಾಲಿನ ಬದುಕಿನಲ್ಲಿ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದೇವೆ. ಬದುಕಿಗಿಂತ ಬರಹ ಮುಖ್ಯ. ದೃಷ್ಟಿ ವಿಶೇಷಚೇತನರ ಕವಿಗೋಷ್ಠಿ ಆಯೋಜಿಸುವ ಮೂಲಕ‌ ಸಾಹಿತ್ಯ ಪರಿಷತ್ತು ಐತಿಹಾಸಿಕ ಕಾರ್ಯಕ್ಕೆ ಮುನ್ನುಡಿ ಬರೆದಿದ್ದು ಮುಂದಿನ ದಿನಗಳಲ್ಲಿ ದೃಷ್ಟಿ ವಿಶೇಷಚೇತನರ ಕೃತಿಗಳನ್ನು ಚಿಂತನೆಗೆ ಒಳಪಡಿಸುವ ಕಾರ್ಯವಾಗಲಿ ಎಂದರು.

ಈ ಸಂದರ್ಭದಲ್ಲಿ ನಾಲ್ವರನ್ನು ನಾವು ನೆನೆಯಬೇಕು. ಬರಗೂರು ರಾಮಚಂದ್ರಪ್ಪ ಅವರು ಅಂಧರ ಕವಿಗೋಷ್ಠಿಗೆ ಮುನ್ನುಡಿ ಬರೆದರು. ಸಿದ್ದಲಿಂಗಯ್ಯ ಅವರು 50 ಕೃತಿಗಳನ್ನು ಬ್ರೈಲಿ ಲಿಪಿಯಲ್ಲಿ ಮುದ್ರಿಸಿದರು. ಎಚ್.ವಿಶ್ವನಾಥ್ ಅವರು ದತ್ತಿ ಪ್ರಶಸ್ತಿ ಆರಂಭಿಸಿ ದೃಷ್ಟಿ ಚೇತನರಿಗೆ ಪ್ರಶಸ್ತಿ ನೀಡಿದರು. ಈಗ ನಾಡೋಜ ಡಾ. ಮಹೇಶ್ ಜೋಶಿ ಅವರು ದಾಖಲಾರ್ಹವಾದ ಐತಿಹಾಸಿಕ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದರು.

ನಂತರ ಅವರು ವಾಚಿಸಿದ ಆತ್ಮದ ಹಾಡು ಕವನಕ್ಕೆ ನೆರೆದಿದ್ದ ಪ್ರೇಕ್ಷಕರು ಚಪ್ಪಾಳೆಯ ಸುರಿಮಳೆ ಹರಿಸಿದರು. ಬಳಿಕ ಬಾಪು ಖಾಡೆ, ಹರೀಶ್ ಸಿ, ಹೇಮಂತ ಕುಮಾರ್, ಜಯನಂದಾ ಟೋಪುಗೋಳು, ರಮಾ ಫಣಿಭಟ್ ಗೋಪಿ, ಸೋಮಶೇಖರ್ ಬಳೆಗಾರ್, ಶಿವಸ್ವಾಮಿ ಚೀನಕೇರ, ಟಿ. ಎಂ. ತೋಟಯ್ಯ, ಡಾ. ಕೃಷ್ಣ ಹೊಂಬಾಳ, ಡಾ. ಆನಂದ್ ಇಂದೂರಾ ಅವರು ಕವನ ವಾಚಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

14 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

14 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

15 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

15 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago