ಹಾಸನ: ಮಂಡ್ಯ ಮೂಲಕ ವ್ಯಕ್ತಿಯೊಬ್ಬರು ಖಾಸಗಿ ಬಸ್ನಲ್ಲಿ ಮುಂಬೈನಿಂದ ಮಂಡ್ಯಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟಿದ್ದಾರೆ.
ಮಂಡ್ಯ ಜಿಲ್ಲೆಯ ಇಲ್ಲೇನಹಳ್ಳಿ ಗ್ರಾಮದ ಟಿ.ಸ್ವಾಮಿ (39) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಪ್ರಯಾಣದ ವೇಳೆ ಹೃದಯಾಘಾತದಿಂದ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ.
ಮುಂಬೈನಿಂದ ಮಂಡ್ಯಕ್ಕೆ ಹೋಗುತ್ತಿದ್ದ GA-07-T-3303 ನಂಬರ್ನ ಸ್ಲೀಪರ್ ಕೋಚ್ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಚನ್ನರಾಯಪಟ್ಟಣದಲ್ಲಿ ವಿಶ್ರಾಂತಿಗೆಂದು ಬಸ್ ನಿಲ್ಲಿಸಿದ್ದಾರೆ.
ಎಲ್ಲಾ ಪ್ರಯಾಣಿಕರೆಲ್ಲರೂ ಕೆಳಗಿಳಿದರೂ ಸ್ವಾಮಿ ಮಾತ್ರ ಇಳಿದಿರಲಿಲ್ಲ. ನಿರ್ವಾಹಕ ಅವರನ್ನು ತಟ್ಟಿ ಎಬ್ಬಿಸಲು ಯತ್ನಿಸಿದರು ಎಚ್ಚರಗೊಳ್ಳದ ವ್ಯಕ್ತಿಯ ಮೇಲೆ ಅನುಮಾನಗೊಂಡು ಪರಿಶೀಲಿಸಿದಾಗ ಮೃತರಾಗಿರುವುದು ತಿಳಿದು ಬಂದಿದೆ.
ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…