Categories: ಮಂಡ್ಯ

ಯುಗಾದಿ ವೇಳೆಗೆ ರೈತರಿಗೆ ಹೊಸ ಆಯಾಮದ ಬಿತ್ತನೆ ಲಭ್ಯ: ಡಾ. ಎಚ್ ಎಸ್ ಶಿವರಾಮ್

ಮಂಡ್ಯ: ಮುಂದಿನ ವರ್ಷ ಯುಗಾದಿ ಹೊತ್ತಿಗೆ ರೈತರಿಗೆ ಹೊಸ ಆಯಾಮದ ಕೃಷಿ ಬಿತ್ತನೆಗಳನ್ನ ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಸಂಶೋಧನಾ ನಿರ್ದೇಶಕ ಡಾ. ಎಚ್ ಎಸ್ ಶಿವರಾಮ್ ತಿಳಿಸಿದರು.

ಅವರು ಇಂದು ಮಂಡ್ಯದ ವಿ.ಸಿ ಫಾರಂ ವಲಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ರೈತರು ಬಿತ್ತನೆ ಮಾಡುವುದಕ್ಕೆ ಸಾಕಷ್ಟು ಹೊಸ ಹೊಸ ತಳಿಗಳು ಮಾರುಕಟ್ಟೆಗೆ ಬಂದಿವೆ ಅದರ ಬಳಕೆ ಮಾಡಿಕೊಳ್ಳಿ ಎಂದರು. ಹೈನುಗಾರಿಕೆ, ಕೃಷಿಗಾರಿಕೆ, ಪಶು ಸಂಗೋಪನೆ ಸೇರಿದಂತೆ ಎಲ್ಲಾ ರೀತಿಯ ಕೃಷಿಗೆ ಸಂಬಂಧಿಸಿರುವ ಅಂಶಗಳಿಗೆ ರೈತರು ಹೆಚ್ಚಿನ ಪ್ರಾಮುಖ್ಯತೆ ನೀಡಿ ಎಂದರು.

ಮಂಡ್ಯ ಮತ್ತು ಭದ್ರಾವತಿ ಭಾಗದಲ್ಲಿ ಮೊದಲು ಬೆಲ್ಲ ತಯಾರಿಕೆಯಲ್ಲಿ ರಾಸಾಯನಿಕ ಉಪಯೋಗಿಸುತ್ತಿದ್ದರು ಅದು ಆರೋಗ್ಯಕ್ಕೆ ಮಾರಕ ಎಂದು ಬಹುಕೊಪ್ಪರಿಕೆ ಮಾದರಿಯಲ್ಲಿ ರಾಸಾಯನಿಕ ಮುಕ್ತ ಬೆಲ್ಲವನ್ನು ತಯಾರಿಸಿ ಮಾರಾಟ ಮಾಡುತ್ತಿದ್ದೇವೆ ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದರು.

ಕೃಷಿ ಮೇಳದಲ್ಲಿ ಸಾವಿರಾರು ಜನ ಸೇರಿದ್ದು ಹೆಮ್ಮೆಯ ವಿಷಯ. ರೈತರು ಮೇಳದ ಸಂಪೂರ್ಣ ಉಪಯೋಗ ಪಡೆದುಕೊಳ್ಳಬೇಕು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಹೆಚ್ಚು ಆದಾಯ ಗಳಿಸಿಕೊಳ್ಳಿ ಹಾಗೂ ಕೃಷಿ ಇಲಾಖೆಯ ಎಲ್ಲ ಸೇವೆಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು..

ಕೃಷಿ ಮೇಳ ರೈತರ ಹಬ್ಬ: ಡಾ ವೈ ಎನ್ ಶಿವಲಿಂಗಯ್ಯ

ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶಕರಾದ ಡಾ. ವೈ ಎನ್ ಶಿವಲಿಂಗಯ್ಯ ಮಾತನಾಡಿ, ಕೃಷಿ ಮೇಳವು ಸಾಮಾನ್ಯವಾಗಿ ರೈತರಿಗೆ ಹಬ್ಬವಿದ್ದಂತೆ. ರೈತರಿಗೆ ಉಪಯೋಗವಾಗುವಂತಹ ಸಾಕಷ್ಟು ವಿಷಯ ಅಂಶಗಳನ್ನು ಈ ಕೃಷಿ ಮೇಳದಲ್ಲಿ ಅನಾವರಣಗೊಳಿಸಲಾಗಿದೆ. ಮೇಳದ ಸದುಪಯೋಗವನ್ನು ಕೃಷಿಕ ಮಂದಿಯವರು ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಒಂದು ಕಾರ್ಯಕ್ರಮ ಯಶಸ್ಸು ಕಾಣಬೇಕು ಎಂದರೆ ಕಾರ್ಯಕ್ರಮಕ್ಕೆ ಎಷ್ಟು ಜನ ವೀಕ್ಷಕರು ಬಂದಿದ್ದರು ಎಂಬುವುದು ಮುಖ್ಯವಾಗುತ್ತದೆ ಆದರೆ ಕೃಷಿ ಮೇಳವನ್ನು ಎರಡು ದಿನ ಆಯೋಜನೆ ಮಾಡಿದ್ದು ನಿಜಕ್ಕೂ ಸಂತಸದ ವಿಷಯ ಮತ್ತು ಕಾರ್ಯಕ್ರಮದಲ್ಲಿ ಸಾಕಷ್ಟು ಜನ ಭಾಗವಹಿಸಿದ್ದರು ಎಂದು ಹೇಳಿದರು.

ರೈತರೇ ದೇಶದ ಬೆನ್ನೆಲುಬಾಗಿರುವಾಗ ಮೊದಲು ನಾವೆಲ್ಲರೂ ರೈತರಿಗೆ ರೈತರು ಮಾಡುವ ಕೃಷಿಗೆ ಬೆಲೆ ಕೊಡಬೇಕು ಎಂದರು. ಹೆಚ್ಚಾಗಿ ಹೈನುಗಾರಿಕೆಗೆ ಹೆಚ್ಚು ಒತ್ತನ್ನು ನೀಡಿ, ನಾಟಿ ತಳಿ ಫಾರಂ ತಳಿ ಎಂಬ ವಿಧವಾದ ತಳಿಗಳು ಸಾಕಷ್ಟಿದೆ ಅದರ ಉಪಯೋಗ ಪಡೆದುಕೊಳ್ಳಿ ಎಂದರು.

ಇದೇ ಸಂದರ್ಭದಲ್ಲಿ ವೇದಿಕೆಯ ಮೇಲೆ ಕೃಷಿ ಮೇಳದಲ್ಲಿ ಆಯೋಜನೆ ಮಾಡಿದ್ದ ಕೃಷಿಗೆ ಸಂಬಂಧಿಸಿದ ಪ್ರದರ್ಶನಗಳಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಂಡ್ಯ ವಿ ಸಿ ಫಾರಂ ಕೃಷಿ ಮಹಾವಿದ್ಯಾಲಯ ಡೀನ್ (ಕೃಷಿ ) ಹಾಗೂ ಆವರಣದ ಮುಖ್ಯಸ್ಥರು ಡಾ ಪಿ ಎಸ್ ಫಾತಿಮಾ, ಮಂಡ್ಯ ವಿ ಸಿ ಫಾರಂ ವಲಯ ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ ಎನ್ ಶಿವಕುಮಾರ್, ಮಂಡ್ಯ ವಿ. ಸಿ ಫಾರಂನ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ.ಕಮಲಾಬಾಯಿ ಕೂಡಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

9 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

11 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

11 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

11 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

12 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

12 hours ago