Categories: ಮಂಡ್ಯ

ಯುಗಾದಿ ವೇಳೆಗೆ ರೈತರಿಗೆ ಹೊಸ ಆಯಾಮದ ಬಿತ್ತನೆ ಲಭ್ಯ: ಡಾ. ಎಚ್ ಎಸ್ ಶಿವರಾಮ್

ಮಂಡ್ಯ: ಮುಂದಿನ ವರ್ಷ ಯುಗಾದಿ ಹೊತ್ತಿಗೆ ರೈತರಿಗೆ ಹೊಸ ಆಯಾಮದ ಕೃಷಿ ಬಿತ್ತನೆಗಳನ್ನ ತಲುಪಿಸುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಸಂಶೋಧನಾ ನಿರ್ದೇಶಕ ಡಾ. ಎಚ್ ಎಸ್ ಶಿವರಾಮ್ ತಿಳಿಸಿದರು.

ಅವರು ಇಂದು ಮಂಡ್ಯದ ವಿ.ಸಿ ಫಾರಂ ವಲಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ರೈತರು ಬಿತ್ತನೆ ಮಾಡುವುದಕ್ಕೆ ಸಾಕಷ್ಟು ಹೊಸ ಹೊಸ ತಳಿಗಳು ಮಾರುಕಟ್ಟೆಗೆ ಬಂದಿವೆ ಅದರ ಬಳಕೆ ಮಾಡಿಕೊಳ್ಳಿ ಎಂದರು. ಹೈನುಗಾರಿಕೆ, ಕೃಷಿಗಾರಿಕೆ, ಪಶು ಸಂಗೋಪನೆ ಸೇರಿದಂತೆ ಎಲ್ಲಾ ರೀತಿಯ ಕೃಷಿಗೆ ಸಂಬಂಧಿಸಿರುವ ಅಂಶಗಳಿಗೆ ರೈತರು ಹೆಚ್ಚಿನ ಪ್ರಾಮುಖ್ಯತೆ ನೀಡಿ ಎಂದರು.

ಮಂಡ್ಯ ಮತ್ತು ಭದ್ರಾವತಿ ಭಾಗದಲ್ಲಿ ಮೊದಲು ಬೆಲ್ಲ ತಯಾರಿಕೆಯಲ್ಲಿ ರಾಸಾಯನಿಕ ಉಪಯೋಗಿಸುತ್ತಿದ್ದರು ಅದು ಆರೋಗ್ಯಕ್ಕೆ ಮಾರಕ ಎಂದು ಬಹುಕೊಪ್ಪರಿಕೆ ಮಾದರಿಯಲ್ಲಿ ರಾಸಾಯನಿಕ ಮುಕ್ತ ಬೆಲ್ಲವನ್ನು ತಯಾರಿಸಿ ಮಾರಾಟ ಮಾಡುತ್ತಿದ್ದೇವೆ ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದರು.

ಕೃಷಿ ಮೇಳದಲ್ಲಿ ಸಾವಿರಾರು ಜನ ಸೇರಿದ್ದು ಹೆಮ್ಮೆಯ ವಿಷಯ. ರೈತರು ಮೇಳದ ಸಂಪೂರ್ಣ ಉಪಯೋಗ ಪಡೆದುಕೊಳ್ಳಬೇಕು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಹೆಚ್ಚು ಆದಾಯ ಗಳಿಸಿಕೊಳ್ಳಿ ಹಾಗೂ ಕೃಷಿ ಇಲಾಖೆಯ ಎಲ್ಲ ಸೇವೆಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು..

ಕೃಷಿ ಮೇಳ ರೈತರ ಹಬ್ಬ: ಡಾ ವೈ ಎನ್ ಶಿವಲಿಂಗಯ್ಯ

ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶಕರಾದ ಡಾ. ವೈ ಎನ್ ಶಿವಲಿಂಗಯ್ಯ ಮಾತನಾಡಿ, ಕೃಷಿ ಮೇಳವು ಸಾಮಾನ್ಯವಾಗಿ ರೈತರಿಗೆ ಹಬ್ಬವಿದ್ದಂತೆ. ರೈತರಿಗೆ ಉಪಯೋಗವಾಗುವಂತಹ ಸಾಕಷ್ಟು ವಿಷಯ ಅಂಶಗಳನ್ನು ಈ ಕೃಷಿ ಮೇಳದಲ್ಲಿ ಅನಾವರಣಗೊಳಿಸಲಾಗಿದೆ. ಮೇಳದ ಸದುಪಯೋಗವನ್ನು ಕೃಷಿಕ ಮಂದಿಯವರು ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಒಂದು ಕಾರ್ಯಕ್ರಮ ಯಶಸ್ಸು ಕಾಣಬೇಕು ಎಂದರೆ ಕಾರ್ಯಕ್ರಮಕ್ಕೆ ಎಷ್ಟು ಜನ ವೀಕ್ಷಕರು ಬಂದಿದ್ದರು ಎಂಬುವುದು ಮುಖ್ಯವಾಗುತ್ತದೆ ಆದರೆ ಕೃಷಿ ಮೇಳವನ್ನು ಎರಡು ದಿನ ಆಯೋಜನೆ ಮಾಡಿದ್ದು ನಿಜಕ್ಕೂ ಸಂತಸದ ವಿಷಯ ಮತ್ತು ಕಾರ್ಯಕ್ರಮದಲ್ಲಿ ಸಾಕಷ್ಟು ಜನ ಭಾಗವಹಿಸಿದ್ದರು ಎಂದು ಹೇಳಿದರು.

ರೈತರೇ ದೇಶದ ಬೆನ್ನೆಲುಬಾಗಿರುವಾಗ ಮೊದಲು ನಾವೆಲ್ಲರೂ ರೈತರಿಗೆ ರೈತರು ಮಾಡುವ ಕೃಷಿಗೆ ಬೆಲೆ ಕೊಡಬೇಕು ಎಂದರು. ಹೆಚ್ಚಾಗಿ ಹೈನುಗಾರಿಕೆಗೆ ಹೆಚ್ಚು ಒತ್ತನ್ನು ನೀಡಿ, ನಾಟಿ ತಳಿ ಫಾರಂ ತಳಿ ಎಂಬ ವಿಧವಾದ ತಳಿಗಳು ಸಾಕಷ್ಟಿದೆ ಅದರ ಉಪಯೋಗ ಪಡೆದುಕೊಳ್ಳಿ ಎಂದರು.

ಇದೇ ಸಂದರ್ಭದಲ್ಲಿ ವೇದಿಕೆಯ ಮೇಲೆ ಕೃಷಿ ಮೇಳದಲ್ಲಿ ಆಯೋಜನೆ ಮಾಡಿದ್ದ ಕೃಷಿಗೆ ಸಂಬಂಧಿಸಿದ ಪ್ರದರ್ಶನಗಳಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಂಡ್ಯ ವಿ ಸಿ ಫಾರಂ ಕೃಷಿ ಮಹಾವಿದ್ಯಾಲಯ ಡೀನ್ (ಕೃಷಿ ) ಹಾಗೂ ಆವರಣದ ಮುಖ್ಯಸ್ಥರು ಡಾ ಪಿ ಎಸ್ ಫಾತಿಮಾ, ಮಂಡ್ಯ ವಿ ಸಿ ಫಾರಂ ವಲಯ ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ ಎನ್ ಶಿವಕುಮಾರ್, ಮಂಡ್ಯ ವಿ. ಸಿ ಫಾರಂನ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ.ಕಮಲಾಬಾಯಿ ಕೂಡಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

35 mins ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

1 hour ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

1 hour ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

1 hour ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

1 hour ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

1 hour ago