ಮಂಡ್ಯ

ಮೈಷುಗರ್‌ ಆವರಣದಲ್ಲೆ ಹೊಸ ಕಾರ್ಖಾನೆ

ಮಂಡ್ಯ : ಈಗಿರುವ ಮೈಸೂರು ಸಕ್ಕರೆ ಕಾರ್ಖಾನೆ ಆವರಣದಲ್ಲೇ ರಾಜ್ಯ ಸರ್ಕಾರ ಹೊಸ ಕಾರ್ಖಾನೆಯನ್ನು ನಿರ್ಮಿಸಲು ತೀರ್ಮಾನಿಸಿದೆ. ೫೯.೮೦ ಕೋಟಿ ರೂ. ವೆಚ್ಚದಲ್ಲಿ ೫ ಸಾವಿರ ಟಿಸಿಡಿ ಸಾಮರ್ಥ್ಯದ ಕಬ್ಬು ನುರಿಸುವ ಹೊಸ ಯಂತ್ರ, ೧೧೬ ಕೋಟಿ ರೂ. ವೆಚ್ಚದ ೮೦ ಕೆಎಲ್‌ಪಿಡಿ ಸಾಮರ್ಥ್ಯ ಕಾಕಂಬಿ ಆಧಾರಿತ ಎಥೆನಾಲ್ ಘಟಕವನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಎಸ್.ಪಾಟೀಲ ಅವರು ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯ ಮಧು ಜಿ.ಮಾದೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಕ್ಕರೆ ಸಚಿವ ಶಿವಾನಂದ ಎಸ್.ಪಾಟೀಲ ಅವರು, ಹೊಸ ಕಾರ್ಖಾನೆ ನಿರ್ಮಾಣ ಸಂಬಂಧ ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಿಂದ ವಿಸ್ತೃತ ಯೋಜನಾ ವರದಿಯನ್ನು ಪಡೆಯಲಾಗಿದೆ. ವರದಿಯಲ್ಲಿರುವ ಮೂರು ಅಂಶಗಳಲ್ಲಿ ಕಬ್ಬು ನುರಿಸಲು ಹೊಸ ಯಂತ್ರ ಅಳವಡಿಕೆ, ಎಥೆನಾಲ್ ಘಟಕ ಸ್ಥಾಪನೆಗೆ ಅಗತ್ಯವಿರುವ ೧೭೫.೮೦ ಕೋಟಿ ರೂ. ಪ್ರಸ್ತಾವನೆಯನ್ನು ಸರ್ಕಾರ ಒಪ್ಪಿದ್ದು, ಇದರಲ್ಲಿ ೧೦೦ ಕೋಟಿ ರೂ. ಸಹಾಯಧನವನ್ನು ರಾಜ್ಯ ಸರ್ಕಾರದಿಂದ ಒದಗಿಸಲು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ನಂತರ ಸಚಿವ ಸಂಪುಟದಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಹೊಸ ಬಾಯ್ಲರ್ ಘಟಕ ಸ್ಥಾಪನೆಗೆ ೨೮೮ ಕೋಟಿ ರೂ. ಅಗತ್ಯವಿರುವುದರಿಂದ ಸದ್ಯಕ್ಕೆ ಆ ಪ್ರಸ್ತಾವನೆಯನ್ನು ಮುಂದೂಡಲಾಗಿದೆ. ಮುಂದಿನ ಹಂಗಾಮುಗಳಲ್ಲಿ ಕಬ್ಬಿನ ಲಭ್ಯತೆಯನ್ನು ಆಧರಿಸಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

9 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

9 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

13 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago