mysugar
ಮಂಡ್ಯ : ಈಗಿರುವ ಮೈಸೂರು ಸಕ್ಕರೆ ಕಾರ್ಖಾನೆ ಆವರಣದಲ್ಲೇ ರಾಜ್ಯ ಸರ್ಕಾರ ಹೊಸ ಕಾರ್ಖಾನೆಯನ್ನು ನಿರ್ಮಿಸಲು ತೀರ್ಮಾನಿಸಿದೆ. ೫೯.೮೦ ಕೋಟಿ ರೂ. ವೆಚ್ಚದಲ್ಲಿ ೫ ಸಾವಿರ ಟಿಸಿಡಿ ಸಾಮರ್ಥ್ಯದ ಕಬ್ಬು ನುರಿಸುವ ಹೊಸ ಯಂತ್ರ, ೧೧೬ ಕೋಟಿ ರೂ. ವೆಚ್ಚದ ೮೦ ಕೆಎಲ್ಪಿಡಿ ಸಾಮರ್ಥ್ಯ ಕಾಕಂಬಿ ಆಧಾರಿತ ಎಥೆನಾಲ್ ಘಟಕವನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಎಸ್.ಪಾಟೀಲ ಅವರು ತಿಳಿಸಿದರು.
ವಿಧಾನ ಪರಿಷತ್ತಿನಲ್ಲಿ ಸದಸ್ಯ ಮಧು ಜಿ.ಮಾದೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಕ್ಕರೆ ಸಚಿವ ಶಿವಾನಂದ ಎಸ್.ಪಾಟೀಲ ಅವರು, ಹೊಸ ಕಾರ್ಖಾನೆ ನಿರ್ಮಾಣ ಸಂಬಂಧ ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಿಂದ ವಿಸ್ತೃತ ಯೋಜನಾ ವರದಿಯನ್ನು ಪಡೆಯಲಾಗಿದೆ. ವರದಿಯಲ್ಲಿರುವ ಮೂರು ಅಂಶಗಳಲ್ಲಿ ಕಬ್ಬು ನುರಿಸಲು ಹೊಸ ಯಂತ್ರ ಅಳವಡಿಕೆ, ಎಥೆನಾಲ್ ಘಟಕ ಸ್ಥಾಪನೆಗೆ ಅಗತ್ಯವಿರುವ ೧೭೫.೮೦ ಕೋಟಿ ರೂ. ಪ್ರಸ್ತಾವನೆಯನ್ನು ಸರ್ಕಾರ ಒಪ್ಪಿದ್ದು, ಇದರಲ್ಲಿ ೧೦೦ ಕೋಟಿ ರೂ. ಸಹಾಯಧನವನ್ನು ರಾಜ್ಯ ಸರ್ಕಾರದಿಂದ ಒದಗಿಸಲು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ನಂತರ ಸಚಿವ ಸಂಪುಟದಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಹೊಸ ಬಾಯ್ಲರ್ ಘಟಕ ಸ್ಥಾಪನೆಗೆ ೨೮೮ ಕೋಟಿ ರೂ. ಅಗತ್ಯವಿರುವುದರಿಂದ ಸದ್ಯಕ್ಕೆ ಆ ಪ್ರಸ್ತಾವನೆಯನ್ನು ಮುಂದೂಡಲಾಗಿದೆ. ಮುಂದಿನ ಹಂಗಾಮುಗಳಲ್ಲಿ ಕಬ್ಬಿನ ಲಭ್ಯತೆಯನ್ನು ಆಧರಿಸಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…
ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…