ಮಂಡ್ಯ

ದೆಹಲಿಯಿಂದ ಮಂಡ್ಯದ ಕೊಕ್ಕರೆ ಬೆಳ್ಳೂರಿಗೆ ಬಂದ ಪಾರಿವಾಳ

ಅಣ್ಣೂರು ಸತೀಶ್

ಭಾರತೀನಗರ: ಸಾಕಷ್ಟು ಜನರು ಪಾರಿವಾಳವನ್ನು ಸಾಕುತ್ತಾರೆ. ಅದರಲ್ಲಿ ಕೆಲವರು ರೇಸ್‌ಗಾಗಿ ಪಾರಿವಾಳವನ್ನು ಸಾಕುವವರಿದ್ದಾರೆ. ಹಲವೆಡೆ ಈ ಪಾರಿವಾಳ ರೇಸ್ ದೊಡ್ಡ ಕ್ರೇಜ್ ಆಗಿದೆ. ರೇಸ್‌ಗಾಗಿಯೇ ಕೋಟ್ಯಂತರ ರೂ. ಖರ್ಚು ಮಾಡಿ ಪಾರಿವಾಳವನ್ನು ಖರೀದಿಸುವವರಿದ್ದಾರೆ.

ಇದೀಗ ಇಂತಹದ್ದೇ ಒಂದು ರೇಸ್‌ನಲ್ಲಿ ಪಾಲ್ಗೊಂಡಿದ್ದ ಪಾರಿವಾಳ ೫೨ ದಿನ, ೧೭೯೦ ಕಿ.ಮೀ. ಕ್ರಮಿಸಿ ತನ್ನ ಮಾಲೀಕನನ್ನ ಹುಡುಕಿಕೊಂಡು ಬಂದು ದಾಖಲೆ ಬರೆದಿದೆ. ಇಂತಹ ಅಚ್ಚರಿ ಘಟನೆಗೆ ಮಂಡ್ಯ ಜಿಲ್ಲೆಯ ಕೊಕ್ಕರೆಬೆಳ್ಳೂರಿನಲ್ಲಿ ಸಾಕ್ಷಿಯಾಗಿದೆ.

ದೆಹಲಿಯಿಂದ ಮಂಡ್ಯಕ್ಕೆ ಬಂದ ಪಾರಿವಾಳ: ಮಾಲೀಕನನ್ನ ಹುಡುಕಿಕೊಂಡು ದೆಹಲಿಯಿಂದ ಮಂಡ್ಯಕ್ಕೆ ಬರುವ ಮೂಲಕ ಒಂದು ವರ್ಷ ವಯಸ್ಸಿನ ಅಭಿಮನ್ಯು ಹೆಸರಿನ ಪಾರಿವಾಳ ವಿಶೇಷ ದಾಖಲೆ ನಿರ್ಮಿಸಿದೆ. ೫೨ ದಿನದಲ್ಲಿ ೧೭೯೦ ಕಿ.ಮೀ ಕ್ರಮಿಸಿದ ಅತಿ ಚಿಕ್ಕ ವಯಸ್ಸಿನ ಅಭಿಮನ್ಯು(ಈ ಪಾರಿವಾಳ) ಸಾಧನೆ ಮಾಡಿದೆ.

ಕರ್ನಾಟಕ ಹೋಮಿಂಗ್ ಪಿಜನ್ ಫೆಡರೇಷನ್‌ನಿಂದ ಡೆಲ್ಲಿ ರೇಸ್ ಆಯೋಜಿಸಲಾಗಿತ್ತು. ಈ ರೇಸ್‌ನಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸೇರಿ ಒಟ್ಟು ೨೨ ಪಾರಿವಾಳಗಳು ಭಾಗವಹಿಸಿದ್ದವು. ಎಲ್ಲ ಪಾರಿವಾಳಕ್ಕೂ ರೇಸ್‌ಗೂ ಮುನ್ನವೇ ರಿಂಗ್ ಅಳವಡಿಕೆ ಮಾಡಲಾಗಿತ್ತು. ಏಪ್ರಿಲ್.೫ ರಂದು ದೆಹಲಿಯಿಂದ ಪಾರಿವಾಳಗಳನ್ನ ಹಾರಿಬಿಡಲಾಗಿತ್ತು.

ಡೆಲ್ಲಿ ರೇಸ್‌ನಲ್ಲಿ ಭಾಗವಹಿಸಿದ್ದ ಮಂಡ್ಯದ ಕೊಕ್ಕರೆ ಬೆಳ್ಳೂರಿನ ಶ್ರೀಧರ್ ಎಂಬುವವರಿಗೆ ಸೇರಿದ ಒಂದು ವರ್ಷದ ಅಭಿಮನ್ಯು ಹೆಸರಿನ ಪಾರಿವಾಳ, ದೆಹಲಿಯಿಂದ ಮೇ.೨೮ಕ್ಕೆ ಮಂಡ್ಯಕ್ಕೆ ವಾಪಸ್ಸಾಗಿದೆ. ಆ ಮೂಲಕ ಬರೋಬ್ಬರಿ ೧೭೯೦ ಕಿ.ಮೀ. ದಾಟಿ ತನ್ನ ಮಾಲೀಕನನ್ನು ಹುಡುಕಿಕೊಂಡು ಬಂದಿದೆ.

೨೨ ಪಾರಿವಾಳಗಳ ಪೈಕಿ ೧೪ ಪಾರಿವಾಳಗಳು ತಮ್ಮ ನೆಲೆಗಳಿಗೆ ವಾಪಸ್ಸಾಗಿವೆ. ಅದರಲ್ಲಿ ಅತಿ ಚಿಕ್ಕ ವಯಸ್ಸಿನ ಪಾರಿವಾಳವಾಗಿರುವ ಮಂಡ್ಯದ ಅಭಿಮನ್ಯು, ತನ್ನ ಮಾಲೀಕನನ್ನ ಹುಡುಕಿಕೊಂಡು ಬರುವ ಮೂಲಕ ಹೊಸ ಸಾಧನೆ ಮಾಡಿದೆ. ಆ ಮೂಲಕ ಮೊದಲ ರೇಸ್‌ನಲ್ಲೇ ಯಶಸ್ಸು ಕಂಡ ಅತಿ ಚಿಕ್ಕ ಪಾರಿವಾಳವೆಂಬ ದಾಖಲೆ ಬರೆದಿದೆ.

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

3 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

5 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

6 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

6 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

8 hours ago