ಮಂಡ್ಯ

ದೆಹಲಿಯಿಂದ ಮಂಡ್ಯದ ಕೊಕ್ಕರೆ ಬೆಳ್ಳೂರಿಗೆ ಬಂದ ಪಾರಿವಾಳ

ಅಣ್ಣೂರು ಸತೀಶ್

ಭಾರತೀನಗರ: ಸಾಕಷ್ಟು ಜನರು ಪಾರಿವಾಳವನ್ನು ಸಾಕುತ್ತಾರೆ. ಅದರಲ್ಲಿ ಕೆಲವರು ರೇಸ್‌ಗಾಗಿ ಪಾರಿವಾಳವನ್ನು ಸಾಕುವವರಿದ್ದಾರೆ. ಹಲವೆಡೆ ಈ ಪಾರಿವಾಳ ರೇಸ್ ದೊಡ್ಡ ಕ್ರೇಜ್ ಆಗಿದೆ. ರೇಸ್‌ಗಾಗಿಯೇ ಕೋಟ್ಯಂತರ ರೂ. ಖರ್ಚು ಮಾಡಿ ಪಾರಿವಾಳವನ್ನು ಖರೀದಿಸುವವರಿದ್ದಾರೆ.

ಇದೀಗ ಇಂತಹದ್ದೇ ಒಂದು ರೇಸ್‌ನಲ್ಲಿ ಪಾಲ್ಗೊಂಡಿದ್ದ ಪಾರಿವಾಳ ೫೨ ದಿನ, ೧೭೯೦ ಕಿ.ಮೀ. ಕ್ರಮಿಸಿ ತನ್ನ ಮಾಲೀಕನನ್ನ ಹುಡುಕಿಕೊಂಡು ಬಂದು ದಾಖಲೆ ಬರೆದಿದೆ. ಇಂತಹ ಅಚ್ಚರಿ ಘಟನೆಗೆ ಮಂಡ್ಯ ಜಿಲ್ಲೆಯ ಕೊಕ್ಕರೆಬೆಳ್ಳೂರಿನಲ್ಲಿ ಸಾಕ್ಷಿಯಾಗಿದೆ.

ದೆಹಲಿಯಿಂದ ಮಂಡ್ಯಕ್ಕೆ ಬಂದ ಪಾರಿವಾಳ: ಮಾಲೀಕನನ್ನ ಹುಡುಕಿಕೊಂಡು ದೆಹಲಿಯಿಂದ ಮಂಡ್ಯಕ್ಕೆ ಬರುವ ಮೂಲಕ ಒಂದು ವರ್ಷ ವಯಸ್ಸಿನ ಅಭಿಮನ್ಯು ಹೆಸರಿನ ಪಾರಿವಾಳ ವಿಶೇಷ ದಾಖಲೆ ನಿರ್ಮಿಸಿದೆ. ೫೨ ದಿನದಲ್ಲಿ ೧೭೯೦ ಕಿ.ಮೀ ಕ್ರಮಿಸಿದ ಅತಿ ಚಿಕ್ಕ ವಯಸ್ಸಿನ ಅಭಿಮನ್ಯು(ಈ ಪಾರಿವಾಳ) ಸಾಧನೆ ಮಾಡಿದೆ.

ಕರ್ನಾಟಕ ಹೋಮಿಂಗ್ ಪಿಜನ್ ಫೆಡರೇಷನ್‌ನಿಂದ ಡೆಲ್ಲಿ ರೇಸ್ ಆಯೋಜಿಸಲಾಗಿತ್ತು. ಈ ರೇಸ್‌ನಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸೇರಿ ಒಟ್ಟು ೨೨ ಪಾರಿವಾಳಗಳು ಭಾಗವಹಿಸಿದ್ದವು. ಎಲ್ಲ ಪಾರಿವಾಳಕ್ಕೂ ರೇಸ್‌ಗೂ ಮುನ್ನವೇ ರಿಂಗ್ ಅಳವಡಿಕೆ ಮಾಡಲಾಗಿತ್ತು. ಏಪ್ರಿಲ್.೫ ರಂದು ದೆಹಲಿಯಿಂದ ಪಾರಿವಾಳಗಳನ್ನ ಹಾರಿಬಿಡಲಾಗಿತ್ತು.

ಡೆಲ್ಲಿ ರೇಸ್‌ನಲ್ಲಿ ಭಾಗವಹಿಸಿದ್ದ ಮಂಡ್ಯದ ಕೊಕ್ಕರೆ ಬೆಳ್ಳೂರಿನ ಶ್ರೀಧರ್ ಎಂಬುವವರಿಗೆ ಸೇರಿದ ಒಂದು ವರ್ಷದ ಅಭಿಮನ್ಯು ಹೆಸರಿನ ಪಾರಿವಾಳ, ದೆಹಲಿಯಿಂದ ಮೇ.೨೮ಕ್ಕೆ ಮಂಡ್ಯಕ್ಕೆ ವಾಪಸ್ಸಾಗಿದೆ. ಆ ಮೂಲಕ ಬರೋಬ್ಬರಿ ೧೭೯೦ ಕಿ.ಮೀ. ದಾಟಿ ತನ್ನ ಮಾಲೀಕನನ್ನು ಹುಡುಕಿಕೊಂಡು ಬಂದಿದೆ.

೨೨ ಪಾರಿವಾಳಗಳ ಪೈಕಿ ೧೪ ಪಾರಿವಾಳಗಳು ತಮ್ಮ ನೆಲೆಗಳಿಗೆ ವಾಪಸ್ಸಾಗಿವೆ. ಅದರಲ್ಲಿ ಅತಿ ಚಿಕ್ಕ ವಯಸ್ಸಿನ ಪಾರಿವಾಳವಾಗಿರುವ ಮಂಡ್ಯದ ಅಭಿಮನ್ಯು, ತನ್ನ ಮಾಲೀಕನನ್ನ ಹುಡುಕಿಕೊಂಡು ಬರುವ ಮೂಲಕ ಹೊಸ ಸಾಧನೆ ಮಾಡಿದೆ. ಆ ಮೂಲಕ ಮೊದಲ ರೇಸ್‌ನಲ್ಲೇ ಯಶಸ್ಸು ಕಂಡ ಅತಿ ಚಿಕ್ಕ ಪಾರಿವಾಳವೆಂಬ ದಾಖಲೆ ಬರೆದಿದೆ.

ಆಂದೋಲನ ಡೆಸ್ಕ್

Recent Posts

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

3 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

3 hours ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

3 hours ago

ಮಳೆ ಅನಾಹುತ ಎದುರಿಸಲು ಮೈಸೂರು ನಗರಪಾಲಿಕೆ ಸಿದ್ಧತೆ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…

3 hours ago

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

11 hours ago