A pigeon that came from Delhi to Kokrebellur in Mandya.
ಅಣ್ಣೂರು ಸತೀಶ್
ಭಾರತೀನಗರ: ಸಾಕಷ್ಟು ಜನರು ಪಾರಿವಾಳವನ್ನು ಸಾಕುತ್ತಾರೆ. ಅದರಲ್ಲಿ ಕೆಲವರು ರೇಸ್ಗಾಗಿ ಪಾರಿವಾಳವನ್ನು ಸಾಕುವವರಿದ್ದಾರೆ. ಹಲವೆಡೆ ಈ ಪಾರಿವಾಳ ರೇಸ್ ದೊಡ್ಡ ಕ್ರೇಜ್ ಆಗಿದೆ. ರೇಸ್ಗಾಗಿಯೇ ಕೋಟ್ಯಂತರ ರೂ. ಖರ್ಚು ಮಾಡಿ ಪಾರಿವಾಳವನ್ನು ಖರೀದಿಸುವವರಿದ್ದಾರೆ.
ಇದೀಗ ಇಂತಹದ್ದೇ ಒಂದು ರೇಸ್ನಲ್ಲಿ ಪಾಲ್ಗೊಂಡಿದ್ದ ಪಾರಿವಾಳ ೫೨ ದಿನ, ೧೭೯೦ ಕಿ.ಮೀ. ಕ್ರಮಿಸಿ ತನ್ನ ಮಾಲೀಕನನ್ನ ಹುಡುಕಿಕೊಂಡು ಬಂದು ದಾಖಲೆ ಬರೆದಿದೆ. ಇಂತಹ ಅಚ್ಚರಿ ಘಟನೆಗೆ ಮಂಡ್ಯ ಜಿಲ್ಲೆಯ ಕೊಕ್ಕರೆಬೆಳ್ಳೂರಿನಲ್ಲಿ ಸಾಕ್ಷಿಯಾಗಿದೆ.
ದೆಹಲಿಯಿಂದ ಮಂಡ್ಯಕ್ಕೆ ಬಂದ ಪಾರಿವಾಳ: ಮಾಲೀಕನನ್ನ ಹುಡುಕಿಕೊಂಡು ದೆಹಲಿಯಿಂದ ಮಂಡ್ಯಕ್ಕೆ ಬರುವ ಮೂಲಕ ಒಂದು ವರ್ಷ ವಯಸ್ಸಿನ ಅಭಿಮನ್ಯು ಹೆಸರಿನ ಪಾರಿವಾಳ ವಿಶೇಷ ದಾಖಲೆ ನಿರ್ಮಿಸಿದೆ. ೫೨ ದಿನದಲ್ಲಿ ೧೭೯೦ ಕಿ.ಮೀ ಕ್ರಮಿಸಿದ ಅತಿ ಚಿಕ್ಕ ವಯಸ್ಸಿನ ಅಭಿಮನ್ಯು(ಈ ಪಾರಿವಾಳ) ಸಾಧನೆ ಮಾಡಿದೆ.
ಕರ್ನಾಟಕ ಹೋಮಿಂಗ್ ಪಿಜನ್ ಫೆಡರೇಷನ್ನಿಂದ ಡೆಲ್ಲಿ ರೇಸ್ ಆಯೋಜಿಸಲಾಗಿತ್ತು. ಈ ರೇಸ್ನಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸೇರಿ ಒಟ್ಟು ೨೨ ಪಾರಿವಾಳಗಳು ಭಾಗವಹಿಸಿದ್ದವು. ಎಲ್ಲ ಪಾರಿವಾಳಕ್ಕೂ ರೇಸ್ಗೂ ಮುನ್ನವೇ ರಿಂಗ್ ಅಳವಡಿಕೆ ಮಾಡಲಾಗಿತ್ತು. ಏಪ್ರಿಲ್.೫ ರಂದು ದೆಹಲಿಯಿಂದ ಪಾರಿವಾಳಗಳನ್ನ ಹಾರಿಬಿಡಲಾಗಿತ್ತು.
ಡೆಲ್ಲಿ ರೇಸ್ನಲ್ಲಿ ಭಾಗವಹಿಸಿದ್ದ ಮಂಡ್ಯದ ಕೊಕ್ಕರೆ ಬೆಳ್ಳೂರಿನ ಶ್ರೀಧರ್ ಎಂಬುವವರಿಗೆ ಸೇರಿದ ಒಂದು ವರ್ಷದ ಅಭಿಮನ್ಯು ಹೆಸರಿನ ಪಾರಿವಾಳ, ದೆಹಲಿಯಿಂದ ಮೇ.೨೮ಕ್ಕೆ ಮಂಡ್ಯಕ್ಕೆ ವಾಪಸ್ಸಾಗಿದೆ. ಆ ಮೂಲಕ ಬರೋಬ್ಬರಿ ೧೭೯೦ ಕಿ.ಮೀ. ದಾಟಿ ತನ್ನ ಮಾಲೀಕನನ್ನು ಹುಡುಕಿಕೊಂಡು ಬಂದಿದೆ.
೨೨ ಪಾರಿವಾಳಗಳ ಪೈಕಿ ೧೪ ಪಾರಿವಾಳಗಳು ತಮ್ಮ ನೆಲೆಗಳಿಗೆ ವಾಪಸ್ಸಾಗಿವೆ. ಅದರಲ್ಲಿ ಅತಿ ಚಿಕ್ಕ ವಯಸ್ಸಿನ ಪಾರಿವಾಳವಾಗಿರುವ ಮಂಡ್ಯದ ಅಭಿಮನ್ಯು, ತನ್ನ ಮಾಲೀಕನನ್ನ ಹುಡುಕಿಕೊಂಡು ಬರುವ ಮೂಲಕ ಹೊಸ ಸಾಧನೆ ಮಾಡಿದೆ. ಆ ಮೂಲಕ ಮೊದಲ ರೇಸ್ನಲ್ಲೇ ಯಶಸ್ಸು ಕಂಡ ಅತಿ ಚಿಕ್ಕ ಪಾರಿವಾಳವೆಂಬ ದಾಖಲೆ ಬರೆದಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…