ಮಂಡ್ಯ

ಮತದಾನದಹಬ್ಬಕ್ಕೆ ಮದುವೆಮನೆಯಂತೆ ಸಿಂಗಾರಗೊಂಡ ಮತಗಟ್ಟೆ

ಮೇಲುಕೋಟೆ : ಚೆಲುವನಾರಾಯಣಸ್ವಾಮಿ ಸನ್ನಿಧಿಯಿರುವ ರಾಮಾನುಜಾಚಾರ್ಯರ ಕರ್ಮಭೂಮಿ ಮೇಲುಕೋಟೆಯ ಗ್ರಾಮಪಂಚಾಯಿತಿ ಕಛೇರಿಯಲ್ಲಿ ಸ್ಥಾಪಿಸಿರುವ ಪ್ರಥಮ ಮತಗಟ್ಟೆ (ಭಾಗದ ಸಂಖ್ಯೆ 28) ಸಾಂಪ್ರದಾಯಿಕ ಮತಗಟ್ಟೆಯಾಗಿ ಸಿಂಗಾರಗೊಂಡು ಮತದಾರರನ್ನು ಆಕರ್ಷಿಸುತ್ತಿದೆ.
ಮೇಲುಕೋಟೆ ಐತಿಹಾಸಿಕ ಕ್ಷೇತ್ರವಾಗಿದ್ದು ಸ್ಮಾರಕಗಳ ತವರೂರಾಗಿದೆ ಇಲ್ಲಿನ ಭಾಗದ ಸಂಖ್ಯೆ 28ರ ಪ್ರಥಮ ಮತಗಟ್ಟೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಜೀವನ ನಿರ್ವಹಿಸುತ್ತಿರುವ ಮತದಾರರೇ ಹೆಚ್ಚಿರುವ ಕಾರಣ ಭಾರತ ಚುನಾವಣಾ ಆಯೋಗ ಸಾಂಪ್ರದಾಯಿಕ ಮತಗಟ್ಟೆಯಾಗಿ ಸಜ್ಜುಗೊಂಡಿದೆ ಮತಗಟ್ಟೆಯ ಮುಂದೆ ರಂಗವಲ್ಲಿ ತಳಿರು ತೋರಣ ಬಾಳೆಕಂದುಗಳಿಂದ ಕೂಡಿದ ಹಸಿರು ಚಪ್ಪರವನ್ನು ಹಾಕಿ ಹೂವಿನಿಂದ ಸಿಂಗಾರ ಮಾಡಲಾಗಿದೆ. ಮತಗಟ್ಟೆ ಒಂದು ಕಡೆ ಭವ್ಯರಾಯಗೋಪುರದ ಚಿತ್ರ ಮತ್ತೊಂದೆಡೆ ಯೋಗನರಸಿಂಹಸ್ವಾಮಿ ಬೆಟ್ಟದ ದೃಶ್ಯ ಬಿಡಿಸಲಾಗಿದೆ.
ಇದರಜೊತೆಗೆ ಜನಪದ ಕಲೆಗಳ ಚಿತ್ತವನ್ನೂ ಬಿಡಿಸಿದ್ದು ಮತಗಟ್ಟೆ ವಿಳಾಸ ಬಿ.ಎಲ್.ಒ ವಿವರ ನಮೂದಿಸಲಾಗಿದೆ 24 ಗಂಟೆಯೂ ಮೇಲಧಿಕಾರಿಗಳು ಮತಗಟ್ಟೆಯನ್ನು ವೀಕ್ಷಿಸಲು ಅನುವಾಗುವಂತೆ ಆನ್ ಲೈನ್ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಮತದಾನದಹಬ್ಬಕ್ಕೆ ಮದುವೆಮನೆಯಂತೆ ಸಿದ್ಧವಾಗಿದೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಸಾಂಪ್ರದಾಯಿಕ ಮತಗಟ್ಟೆ ಸ್ಥಾಪಿಸಲಾಗಿದ್ದು, ಮೇಲುಕೋಟೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ಮತದಾನ ಮಾಡಬೇಕು ಮತದಾನಕ್ಕೆ ಬೇಕಾದ ಎಲ್ಲಾ ಪೂರಕ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಹೆಚ್ಚಿನ ಪೊಲೀಸ್ ಬಂದೂಬಸ್ತ್ ಇರುತ್ತದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ವರ್ ಹಾಗೂ ಮತಗಟ್ಟೆ ಅಧಿಕಾರಿ ಸಂತನಾನರಾಮನ್ ತಿಳಿಸಿದರು.
lokesh

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

1 hour ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

1 hour ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

2 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

2 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

2 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

2 hours ago