ಮಂಡ್ಯ

ಮತದಾನದಹಬ್ಬಕ್ಕೆ ಮದುವೆಮನೆಯಂತೆ ಸಿಂಗಾರಗೊಂಡ ಮತಗಟ್ಟೆ

ಮೇಲುಕೋಟೆ : ಚೆಲುವನಾರಾಯಣಸ್ವಾಮಿ ಸನ್ನಿಧಿಯಿರುವ ರಾಮಾನುಜಾಚಾರ್ಯರ ಕರ್ಮಭೂಮಿ ಮೇಲುಕೋಟೆಯ ಗ್ರಾಮಪಂಚಾಯಿತಿ ಕಛೇರಿಯಲ್ಲಿ ಸ್ಥಾಪಿಸಿರುವ ಪ್ರಥಮ ಮತಗಟ್ಟೆ (ಭಾಗದ ಸಂಖ್ಯೆ 28) ಸಾಂಪ್ರದಾಯಿಕ ಮತಗಟ್ಟೆಯಾಗಿ ಸಿಂಗಾರಗೊಂಡು ಮತದಾರರನ್ನು ಆಕರ್ಷಿಸುತ್ತಿದೆ.
ಮೇಲುಕೋಟೆ ಐತಿಹಾಸಿಕ ಕ್ಷೇತ್ರವಾಗಿದ್ದು ಸ್ಮಾರಕಗಳ ತವರೂರಾಗಿದೆ ಇಲ್ಲಿನ ಭಾಗದ ಸಂಖ್ಯೆ 28ರ ಪ್ರಥಮ ಮತಗಟ್ಟೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಜೀವನ ನಿರ್ವಹಿಸುತ್ತಿರುವ ಮತದಾರರೇ ಹೆಚ್ಚಿರುವ ಕಾರಣ ಭಾರತ ಚುನಾವಣಾ ಆಯೋಗ ಸಾಂಪ್ರದಾಯಿಕ ಮತಗಟ್ಟೆಯಾಗಿ ಸಜ್ಜುಗೊಂಡಿದೆ ಮತಗಟ್ಟೆಯ ಮುಂದೆ ರಂಗವಲ್ಲಿ ತಳಿರು ತೋರಣ ಬಾಳೆಕಂದುಗಳಿಂದ ಕೂಡಿದ ಹಸಿರು ಚಪ್ಪರವನ್ನು ಹಾಕಿ ಹೂವಿನಿಂದ ಸಿಂಗಾರ ಮಾಡಲಾಗಿದೆ. ಮತಗಟ್ಟೆ ಒಂದು ಕಡೆ ಭವ್ಯರಾಯಗೋಪುರದ ಚಿತ್ರ ಮತ್ತೊಂದೆಡೆ ಯೋಗನರಸಿಂಹಸ್ವಾಮಿ ಬೆಟ್ಟದ ದೃಶ್ಯ ಬಿಡಿಸಲಾಗಿದೆ.
ಇದರಜೊತೆಗೆ ಜನಪದ ಕಲೆಗಳ ಚಿತ್ತವನ್ನೂ ಬಿಡಿಸಿದ್ದು ಮತಗಟ್ಟೆ ವಿಳಾಸ ಬಿ.ಎಲ್.ಒ ವಿವರ ನಮೂದಿಸಲಾಗಿದೆ 24 ಗಂಟೆಯೂ ಮೇಲಧಿಕಾರಿಗಳು ಮತಗಟ್ಟೆಯನ್ನು ವೀಕ್ಷಿಸಲು ಅನುವಾಗುವಂತೆ ಆನ್ ಲೈನ್ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಮತದಾನದಹಬ್ಬಕ್ಕೆ ಮದುವೆಮನೆಯಂತೆ ಸಿದ್ಧವಾಗಿದೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಸಾಂಪ್ರದಾಯಿಕ ಮತಗಟ್ಟೆ ಸ್ಥಾಪಿಸಲಾಗಿದ್ದು, ಮೇಲುಕೋಟೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ಮತದಾನ ಮಾಡಬೇಕು ಮತದಾನಕ್ಕೆ ಬೇಕಾದ ಎಲ್ಲಾ ಪೂರಕ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಹೆಚ್ಚಿನ ಪೊಲೀಸ್ ಬಂದೂಬಸ್ತ್ ಇರುತ್ತದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ವರ್ ಹಾಗೂ ಮತಗಟ್ಟೆ ಅಧಿಕಾರಿ ಸಂತನಾನರಾಮನ್ ತಿಳಿಸಿದರು.
lokesh

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

9 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

9 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

9 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

9 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

9 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

10 hours ago