ಮಂಡ್ಯ

ಮತದಾನದಹಬ್ಬಕ್ಕೆ ಮದುವೆಮನೆಯಂತೆ ಸಿಂಗಾರಗೊಂಡ ಮತಗಟ್ಟೆ

ಮೇಲುಕೋಟೆ : ಚೆಲುವನಾರಾಯಣಸ್ವಾಮಿ ಸನ್ನಿಧಿಯಿರುವ ರಾಮಾನುಜಾಚಾರ್ಯರ ಕರ್ಮಭೂಮಿ ಮೇಲುಕೋಟೆಯ ಗ್ರಾಮಪಂಚಾಯಿತಿ ಕಛೇರಿಯಲ್ಲಿ ಸ್ಥಾಪಿಸಿರುವ ಪ್ರಥಮ ಮತಗಟ್ಟೆ (ಭಾಗದ ಸಂಖ್ಯೆ 28) ಸಾಂಪ್ರದಾಯಿಕ ಮತಗಟ್ಟೆಯಾಗಿ ಸಿಂಗಾರಗೊಂಡು ಮತದಾರರನ್ನು ಆಕರ್ಷಿಸುತ್ತಿದೆ.
ಮೇಲುಕೋಟೆ ಐತಿಹಾಸಿಕ ಕ್ಷೇತ್ರವಾಗಿದ್ದು ಸ್ಮಾರಕಗಳ ತವರೂರಾಗಿದೆ ಇಲ್ಲಿನ ಭಾಗದ ಸಂಖ್ಯೆ 28ರ ಪ್ರಥಮ ಮತಗಟ್ಟೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಜೀವನ ನಿರ್ವಹಿಸುತ್ತಿರುವ ಮತದಾರರೇ ಹೆಚ್ಚಿರುವ ಕಾರಣ ಭಾರತ ಚುನಾವಣಾ ಆಯೋಗ ಸಾಂಪ್ರದಾಯಿಕ ಮತಗಟ್ಟೆಯಾಗಿ ಸಜ್ಜುಗೊಂಡಿದೆ ಮತಗಟ್ಟೆಯ ಮುಂದೆ ರಂಗವಲ್ಲಿ ತಳಿರು ತೋರಣ ಬಾಳೆಕಂದುಗಳಿಂದ ಕೂಡಿದ ಹಸಿರು ಚಪ್ಪರವನ್ನು ಹಾಕಿ ಹೂವಿನಿಂದ ಸಿಂಗಾರ ಮಾಡಲಾಗಿದೆ. ಮತಗಟ್ಟೆ ಒಂದು ಕಡೆ ಭವ್ಯರಾಯಗೋಪುರದ ಚಿತ್ರ ಮತ್ತೊಂದೆಡೆ ಯೋಗನರಸಿಂಹಸ್ವಾಮಿ ಬೆಟ್ಟದ ದೃಶ್ಯ ಬಿಡಿಸಲಾಗಿದೆ.
ಇದರಜೊತೆಗೆ ಜನಪದ ಕಲೆಗಳ ಚಿತ್ತವನ್ನೂ ಬಿಡಿಸಿದ್ದು ಮತಗಟ್ಟೆ ವಿಳಾಸ ಬಿ.ಎಲ್.ಒ ವಿವರ ನಮೂದಿಸಲಾಗಿದೆ 24 ಗಂಟೆಯೂ ಮೇಲಧಿಕಾರಿಗಳು ಮತಗಟ್ಟೆಯನ್ನು ವೀಕ್ಷಿಸಲು ಅನುವಾಗುವಂತೆ ಆನ್ ಲೈನ್ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಮತದಾನದಹಬ್ಬಕ್ಕೆ ಮದುವೆಮನೆಯಂತೆ ಸಿದ್ಧವಾಗಿದೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಸಾಂಪ್ರದಾಯಿಕ ಮತಗಟ್ಟೆ ಸ್ಥಾಪಿಸಲಾಗಿದ್ದು, ಮೇಲುಕೋಟೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ಮತದಾನ ಮಾಡಬೇಕು ಮತದಾನಕ್ಕೆ ಬೇಕಾದ ಎಲ್ಲಾ ಪೂರಕ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಹೆಚ್ಚಿನ ಪೊಲೀಸ್ ಬಂದೂಬಸ್ತ್ ಇರುತ್ತದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ವರ್ ಹಾಗೂ ಮತಗಟ್ಟೆ ಅಧಿಕಾರಿ ಸಂತನಾನರಾಮನ್ ತಿಳಿಸಿದರು.
lokesh

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

8 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

8 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

10 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

11 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

14 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

14 hours ago