ಮಂಡ್ಯ

ಮತದಾನದಹಬ್ಬಕ್ಕೆ ಮದುವೆಮನೆಯಂತೆ ಸಿಂಗಾರಗೊಂಡ ಮತಗಟ್ಟೆ

ಮೇಲುಕೋಟೆ : ಚೆಲುವನಾರಾಯಣಸ್ವಾಮಿ ಸನ್ನಿಧಿಯಿರುವ ರಾಮಾನುಜಾಚಾರ್ಯರ ಕರ್ಮಭೂಮಿ ಮೇಲುಕೋಟೆಯ ಗ್ರಾಮಪಂಚಾಯಿತಿ ಕಛೇರಿಯಲ್ಲಿ ಸ್ಥಾಪಿಸಿರುವ ಪ್ರಥಮ ಮತಗಟ್ಟೆ (ಭಾಗದ ಸಂಖ್ಯೆ 28) ಸಾಂಪ್ರದಾಯಿಕ ಮತಗಟ್ಟೆಯಾಗಿ ಸಿಂಗಾರಗೊಂಡು ಮತದಾರರನ್ನು ಆಕರ್ಷಿಸುತ್ತಿದೆ.
ಮೇಲುಕೋಟೆ ಐತಿಹಾಸಿಕ ಕ್ಷೇತ್ರವಾಗಿದ್ದು ಸ್ಮಾರಕಗಳ ತವರೂರಾಗಿದೆ ಇಲ್ಲಿನ ಭಾಗದ ಸಂಖ್ಯೆ 28ರ ಪ್ರಥಮ ಮತಗಟ್ಟೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಜೀವನ ನಿರ್ವಹಿಸುತ್ತಿರುವ ಮತದಾರರೇ ಹೆಚ್ಚಿರುವ ಕಾರಣ ಭಾರತ ಚುನಾವಣಾ ಆಯೋಗ ಸಾಂಪ್ರದಾಯಿಕ ಮತಗಟ್ಟೆಯಾಗಿ ಸಜ್ಜುಗೊಂಡಿದೆ ಮತಗಟ್ಟೆಯ ಮುಂದೆ ರಂಗವಲ್ಲಿ ತಳಿರು ತೋರಣ ಬಾಳೆಕಂದುಗಳಿಂದ ಕೂಡಿದ ಹಸಿರು ಚಪ್ಪರವನ್ನು ಹಾಕಿ ಹೂವಿನಿಂದ ಸಿಂಗಾರ ಮಾಡಲಾಗಿದೆ. ಮತಗಟ್ಟೆ ಒಂದು ಕಡೆ ಭವ್ಯರಾಯಗೋಪುರದ ಚಿತ್ರ ಮತ್ತೊಂದೆಡೆ ಯೋಗನರಸಿಂಹಸ್ವಾಮಿ ಬೆಟ್ಟದ ದೃಶ್ಯ ಬಿಡಿಸಲಾಗಿದೆ.
ಇದರಜೊತೆಗೆ ಜನಪದ ಕಲೆಗಳ ಚಿತ್ತವನ್ನೂ ಬಿಡಿಸಿದ್ದು ಮತಗಟ್ಟೆ ವಿಳಾಸ ಬಿ.ಎಲ್.ಒ ವಿವರ ನಮೂದಿಸಲಾಗಿದೆ 24 ಗಂಟೆಯೂ ಮೇಲಧಿಕಾರಿಗಳು ಮತಗಟ್ಟೆಯನ್ನು ವೀಕ್ಷಿಸಲು ಅನುವಾಗುವಂತೆ ಆನ್ ಲೈನ್ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಮತದಾನದಹಬ್ಬಕ್ಕೆ ಮದುವೆಮನೆಯಂತೆ ಸಿದ್ಧವಾಗಿದೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಸಾಂಪ್ರದಾಯಿಕ ಮತಗಟ್ಟೆ ಸ್ಥಾಪಿಸಲಾಗಿದ್ದು, ಮೇಲುಕೋಟೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ಮತದಾನ ಮಾಡಬೇಕು ಮತದಾನಕ್ಕೆ ಬೇಕಾದ ಎಲ್ಲಾ ಪೂರಕ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಹೆಚ್ಚಿನ ಪೊಲೀಸ್ ಬಂದೂಬಸ್ತ್ ಇರುತ್ತದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ವರ್ ಹಾಗೂ ಮತಗಟ್ಟೆ ಅಧಿಕಾರಿ ಸಂತನಾನರಾಮನ್ ತಿಳಿಸಿದರು.
lokesh

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

6 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

6 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

6 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

6 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

6 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

6 hours ago