ಮಂಡ್ಯ

ಮತದಾನದಹಬ್ಬಕ್ಕೆ ಮದುವೆಮನೆಯಂತೆ ಸಿಂಗಾರಗೊಂಡ ಮತಗಟ್ಟೆ

ಮೇಲುಕೋಟೆ : ಚೆಲುವನಾರಾಯಣಸ್ವಾಮಿ ಸನ್ನಿಧಿಯಿರುವ ರಾಮಾನುಜಾಚಾರ್ಯರ ಕರ್ಮಭೂಮಿ ಮೇಲುಕೋಟೆಯ ಗ್ರಾಮಪಂಚಾಯಿತಿ ಕಛೇರಿಯಲ್ಲಿ ಸ್ಥಾಪಿಸಿರುವ ಪ್ರಥಮ ಮತಗಟ್ಟೆ (ಭಾಗದ ಸಂಖ್ಯೆ 28) ಸಾಂಪ್ರದಾಯಿಕ ಮತಗಟ್ಟೆಯಾಗಿ ಸಿಂಗಾರಗೊಂಡು ಮತದಾರರನ್ನು ಆಕರ್ಷಿಸುತ್ತಿದೆ.
ಮೇಲುಕೋಟೆ ಐತಿಹಾಸಿಕ ಕ್ಷೇತ್ರವಾಗಿದ್ದು ಸ್ಮಾರಕಗಳ ತವರೂರಾಗಿದೆ ಇಲ್ಲಿನ ಭಾಗದ ಸಂಖ್ಯೆ 28ರ ಪ್ರಥಮ ಮತಗಟ್ಟೆಯಲ್ಲಿ ಸಾಂಪ್ರದಾಯಿಕ ಶೈಲಿಯಲ್ಲಿ ಜೀವನ ನಿರ್ವಹಿಸುತ್ತಿರುವ ಮತದಾರರೇ ಹೆಚ್ಚಿರುವ ಕಾರಣ ಭಾರತ ಚುನಾವಣಾ ಆಯೋಗ ಸಾಂಪ್ರದಾಯಿಕ ಮತಗಟ್ಟೆಯಾಗಿ ಸಜ್ಜುಗೊಂಡಿದೆ ಮತಗಟ್ಟೆಯ ಮುಂದೆ ರಂಗವಲ್ಲಿ ತಳಿರು ತೋರಣ ಬಾಳೆಕಂದುಗಳಿಂದ ಕೂಡಿದ ಹಸಿರು ಚಪ್ಪರವನ್ನು ಹಾಕಿ ಹೂವಿನಿಂದ ಸಿಂಗಾರ ಮಾಡಲಾಗಿದೆ. ಮತಗಟ್ಟೆ ಒಂದು ಕಡೆ ಭವ್ಯರಾಯಗೋಪುರದ ಚಿತ್ರ ಮತ್ತೊಂದೆಡೆ ಯೋಗನರಸಿಂಹಸ್ವಾಮಿ ಬೆಟ್ಟದ ದೃಶ್ಯ ಬಿಡಿಸಲಾಗಿದೆ.
ಇದರಜೊತೆಗೆ ಜನಪದ ಕಲೆಗಳ ಚಿತ್ತವನ್ನೂ ಬಿಡಿಸಿದ್ದು ಮತಗಟ್ಟೆ ವಿಳಾಸ ಬಿ.ಎಲ್.ಒ ವಿವರ ನಮೂದಿಸಲಾಗಿದೆ 24 ಗಂಟೆಯೂ ಮೇಲಧಿಕಾರಿಗಳು ಮತಗಟ್ಟೆಯನ್ನು ವೀಕ್ಷಿಸಲು ಅನುವಾಗುವಂತೆ ಆನ್ ಲೈನ್ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಮತದಾನದಹಬ್ಬಕ್ಕೆ ಮದುವೆಮನೆಯಂತೆ ಸಿದ್ಧವಾಗಿದೆ.
ಚುನಾವಣಾ ಆಯೋಗದ ನಿರ್ದೇಶನದಂತೆ ಸಾಂಪ್ರದಾಯಿಕ ಮತಗಟ್ಟೆ ಸ್ಥಾಪಿಸಲಾಗಿದ್ದು, ಮೇಲುಕೋಟೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬಂದು ಮತದಾನ ಮಾಡಬೇಕು ಮತದಾನಕ್ಕೆ ಬೇಕಾದ ಎಲ್ಲಾ ಪೂರಕ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ ಹೆಚ್ಚಿನ ಪೊಲೀಸ್ ಬಂದೂಬಸ್ತ್ ಇರುತ್ತದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ವರ್ ಹಾಗೂ ಮತಗಟ್ಟೆ ಅಧಿಕಾರಿ ಸಂತನಾನರಾಮನ್ ತಿಳಿಸಿದರು.
lokesh

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

3 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

11 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

11 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

11 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

11 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

11 hours ago