ಮಂಡ್ಯ

ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು, ಸಮ್ಮೇಳನಕ್ಕೆ ಬರುವವರಿಗೆ ಭರ್ಜರಿ ಭೋಜನದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಜನರಿಗೆ ಉಪಾಹಾರ ಹಾಗೂ ಊಟ ನೀಡಲು 140 ಕೌಂಟರ್‌ಗಳನ್ನು ತೆರಯಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರಿಗೂ ಒಂದೇ ಮೆನುವನ್ನು ಈಗಾಗಲೇ ಸಿದ್ಧ ಮಾಡಲಾಗಿದೆ. ನೂರಾರು ಬಾಣಸಿಗರು ಹಾಗೂ ಸಾವಿರಾರು ಸಹಾಯಕರಿಂದ ಖಾದ್ಯಗಳು ತಯಾರಾಗುತ್ತಿವೆ.

ಇನ್ನು ಈಗಾಗಲೇ ಸಿಹಿ ತಿನಿಸು ತಯಾರಿಕೆ ಆರಂಭವಾಗಿದ್ದು, ಹೋಳಿಗೆ, ಮೈಸೂರು ಪಾಕ್‌, ಬರ್ಫಿ, ಲಾಡುಗಳನ್ನು ತಯಾರು ಮಾಡಲಾಗುತ್ತಿದೆ.

ನಾಳೆಯಿಂದ ಮೆನು ಪ್ರಕಾರ ಊಟ ರೆಡಿಯಾಗಲಿದ್ದು, ಈ ಬಾರಿ ಮಂಡ್ಯ ಶೈಲಿಯಲ್ಲಿ ಊಟ ಇರಲಿದೆ. ಇದರ ಜೊತೆಗೆ ರಾಜ್ಯದ ಪ್ರಮುಖ ಊಟದ ಮೆನು ಸಹ ಇರಲಿದೆ. ಸಾಹಿತ್ಯ ಸಮ್ಮೇಳನ ನಡೆಯುವ ಮೂರು ದಿನವೂ ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ.

ನುರಿತ ಅಡುಗೆ ಸಿಬ್ಬಂದಿ ಅತ್ಯಂತ ಶುಚಿತ್ವದಿಂದ ಖಾದ್ಯಗಳನ್ನು ತಯಾರು ಮಾಡಲಾಗುತ್ತಿದ್ದು, ಅನುಮತಿ ಪಡೆದವರಷ್ಟೇ ಅಡುಗೆ ಮಾಡುವ ಸ್ಥಳಕ್ಕೆ ಪ್ರವೇಶವಿದೆ. ಇಲ್ಲೂ ಕೂಡ ಯಾವುದೇ ಘಟನೆಗಳು ನಡೆಯದಂತೆ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago