ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು, ಸಮ್ಮೇಳನಕ್ಕೆ ಬರುವವರಿಗೆ ಭರ್ಜರಿ ಭೋಜನದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಜನರಿಗೆ ಉಪಾಹಾರ ಹಾಗೂ ಊಟ ನೀಡಲು 140 ಕೌಂಟರ್ಗಳನ್ನು ತೆರಯಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರಿಗೂ ಒಂದೇ ಮೆನುವನ್ನು ಈಗಾಗಲೇ ಸಿದ್ಧ ಮಾಡಲಾಗಿದೆ. ನೂರಾರು ಬಾಣಸಿಗರು ಹಾಗೂ ಸಾವಿರಾರು ಸಹಾಯಕರಿಂದ ಖಾದ್ಯಗಳು ತಯಾರಾಗುತ್ತಿವೆ.
ಇನ್ನು ಈಗಾಗಲೇ ಸಿಹಿ ತಿನಿಸು ತಯಾರಿಕೆ ಆರಂಭವಾಗಿದ್ದು, ಹೋಳಿಗೆ, ಮೈಸೂರು ಪಾಕ್, ಬರ್ಫಿ, ಲಾಡುಗಳನ್ನು ತಯಾರು ಮಾಡಲಾಗುತ್ತಿದೆ.
ನಾಳೆಯಿಂದ ಮೆನು ಪ್ರಕಾರ ಊಟ ರೆಡಿಯಾಗಲಿದ್ದು, ಈ ಬಾರಿ ಮಂಡ್ಯ ಶೈಲಿಯಲ್ಲಿ ಊಟ ಇರಲಿದೆ. ಇದರ ಜೊತೆಗೆ ರಾಜ್ಯದ ಪ್ರಮುಖ ಊಟದ ಮೆನು ಸಹ ಇರಲಿದೆ. ಸಾಹಿತ್ಯ ಸಮ್ಮೇಳನ ನಡೆಯುವ ಮೂರು ದಿನವೂ ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ.
ನುರಿತ ಅಡುಗೆ ಸಿಬ್ಬಂದಿ ಅತ್ಯಂತ ಶುಚಿತ್ವದಿಂದ ಖಾದ್ಯಗಳನ್ನು ತಯಾರು ಮಾಡಲಾಗುತ್ತಿದ್ದು, ಅನುಮತಿ ಪಡೆದವರಷ್ಟೇ ಅಡುಗೆ ಮಾಡುವ ಸ್ಥಳಕ್ಕೆ ಪ್ರವೇಶವಿದೆ. ಇಲ್ಲೂ ಕೂಡ ಯಾವುದೇ ಘಟನೆಗಳು ನಡೆಯದಂತೆ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…