ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು, ಸಮ್ಮೇಳನಕ್ಕೆ ಬರುವವರಿಗೆ ಭರ್ಜರಿ ಭೋಜನದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಜನರಿಗೆ ಉಪಾಹಾರ ಹಾಗೂ ಊಟ ನೀಡಲು 140 ಕೌಂಟರ್ಗಳನ್ನು ತೆರಯಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರಿಗೂ ಒಂದೇ ಮೆನುವನ್ನು ಈಗಾಗಲೇ ಸಿದ್ಧ ಮಾಡಲಾಗಿದೆ. ನೂರಾರು ಬಾಣಸಿಗರು ಹಾಗೂ ಸಾವಿರಾರು ಸಹಾಯಕರಿಂದ ಖಾದ್ಯಗಳು ತಯಾರಾಗುತ್ತಿವೆ.
ಇನ್ನು ಈಗಾಗಲೇ ಸಿಹಿ ತಿನಿಸು ತಯಾರಿಕೆ ಆರಂಭವಾಗಿದ್ದು, ಹೋಳಿಗೆ, ಮೈಸೂರು ಪಾಕ್, ಬರ್ಫಿ, ಲಾಡುಗಳನ್ನು ತಯಾರು ಮಾಡಲಾಗುತ್ತಿದೆ.
ನಾಳೆಯಿಂದ ಮೆನು ಪ್ರಕಾರ ಊಟ ರೆಡಿಯಾಗಲಿದ್ದು, ಈ ಬಾರಿ ಮಂಡ್ಯ ಶೈಲಿಯಲ್ಲಿ ಊಟ ಇರಲಿದೆ. ಇದರ ಜೊತೆಗೆ ರಾಜ್ಯದ ಪ್ರಮುಖ ಊಟದ ಮೆನು ಸಹ ಇರಲಿದೆ. ಸಾಹಿತ್ಯ ಸಮ್ಮೇಳನ ನಡೆಯುವ ಮೂರು ದಿನವೂ ಬೆಳಿಗ್ಗೆ ತಿಂಡಿ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ.
ನುರಿತ ಅಡುಗೆ ಸಿಬ್ಬಂದಿ ಅತ್ಯಂತ ಶುಚಿತ್ವದಿಂದ ಖಾದ್ಯಗಳನ್ನು ತಯಾರು ಮಾಡಲಾಗುತ್ತಿದ್ದು, ಅನುಮತಿ ಪಡೆದವರಷ್ಟೇ ಅಡುಗೆ ಮಾಡುವ ಸ್ಥಳಕ್ಕೆ ಪ್ರವೇಶವಿದೆ. ಇಲ್ಲೂ ಕೂಡ ಯಾವುದೇ ಘಟನೆಗಳು ನಡೆಯದಂತೆ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…