ಮಂಡ್ಯ: ಇಬ್ಬರು ವಿವಾಹಿತ ಪ್ರೇಮಿಗಳು ಪ್ರೇಮ ಪುರಾಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.
ಮದುವೆಯಾಗಿದ್ದರೂ ಗೃಹಿಣಿ ಗೆಳೆಯನಿಗಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರೆ, ಪ್ರಿಯತಮೆ ಸಾವಿನ ವಿಚಾರ ತಿಳಿದು ಪ್ರಿಯಕರ ಕೂಡ ನೇಣಿಗೆ ಶರಣಾಗಿದ್ದಾರೆ.
ಮದ್ದೂರು ತಾಲ್ಲೂಕಿನ ಯರಗನಹಳ್ಳಿ ಗ್ರಾಮದ ಸೃಷ್ಟಿ ಎಂಬುವವರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿಯಾಗಿದ್ದು, ಬನ್ನಹಳ್ಳಿ ಗ್ರಾಮದ ಪ್ರಸನ್ನ ಎಂಬುವವರೇ ನೇಣಿಗೆ ಶರಣಾಗಿರುವ ವ್ಯಕ್ತಿಯಾಗಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಪ್ರಸನ್ನ ಹಾಗೂ ಸೃಷ್ಟಿ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಈ ನಡುವೆ ಪ್ರಸನ್ನ ಸೃಷ್ಟಿಯ ಸ್ನೇಹಿತೆ ಸ್ಪಂದನಾಳನ್ನು ಪ್ರೀತಿ ಮಾಡುತ್ತಿದ್ದ. ಅಂತಿಮವಾಗಿ ಪ್ರಸನ್ನ ಹಾಗೂ ಸ್ಪಂದನಾ ಮದುವೆಯಾದರೆ ಒಂದೂವರೆ ವರ್ಷದ ಹಿಂದೆ ದಿನೇಶ್ ಎಂಬುವವರ ಜೊತೆ ಸೃಷ್ಟಿಯ ಮದುವೆ ಕೂಡ ನಡೆದು ಹೋಗಿತ್ತು.
ಇಬ್ಬರು ಬೇರೆ ಬೇರೆಯವರನ್ನು ಮದುವೆಯಾಗಿದ್ದರೂ ಪ್ರಸನ್ನ ಹಾಗೂ ಸೃಷ್ಟಿ ನಡುವೆ ಪ್ರೀತಿ ಮಾತುಕತೆ ನಡೆಯುತ್ತಿತ್ತು ಎನ್ನಲಾಗಿದೆ.
ಈ ವಿಚಾರ ಗೊತ್ತಾಗುತ್ತಿದ್ದಂತೆ ಸೃಷ್ಟಿ ಹಾಗೂ ದಿನೇಶ್ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಹೀಗಿರುವಾಗಲೇ ಡಿಸೆಂಬರ್.11ರಂದು ಸೃಷ್ಟಿ ಪತಿ ಮನೆಯಿಂದ ನಾಪತ್ತೆಯಾಗಿದ್ದಳು. ನಾಪತ್ತೆ ಬೆನ್ನಲ್ಲೇ ದಿನೇಶ್ ಅವರು ಕೆಸ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಆದರೆ ಡಿಸೆಂಬರ್.16ರಂದು ಶಿಂಷಾ ನದಿಯಲ್ಲಿ ಸೃಷ್ಟಿಯ ಶವ ಪತ್ತೆಯಾಗಿದ್ದು, ಈ ವಿಚಾರ ತಿಳಿಯುತ್ತಿದ್ದಂತೆ ಪ್ರಸನ್ನ ವಿಚಲಿತಗೊಂಡಿದ್ದ ಎನ್ನಲಾಗಿದೆ.
ಸೃಷ್ಟಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುವಾಗಲೇ ಇತ್ತ ಪ್ರಸನ್ನ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…