ಮಂಡ್ಯ: ಇಬ್ಬರು ವಿವಾಹಿತ ಪ್ರೇಮಿಗಳು ಪ್ರೇಮ ಪುರಾಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.
ಮದುವೆಯಾಗಿದ್ದರೂ ಗೃಹಿಣಿ ಗೆಳೆಯನಿಗಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡರೆ, ಪ್ರಿಯತಮೆ ಸಾವಿನ ವಿಚಾರ ತಿಳಿದು ಪ್ರಿಯಕರ ಕೂಡ ನೇಣಿಗೆ ಶರಣಾಗಿದ್ದಾರೆ.
ಮದ್ದೂರು ತಾಲ್ಲೂಕಿನ ಯರಗನಹಳ್ಳಿ ಗ್ರಾಮದ ಸೃಷ್ಟಿ ಎಂಬುವವರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿಯಾಗಿದ್ದು, ಬನ್ನಹಳ್ಳಿ ಗ್ರಾಮದ ಪ್ರಸನ್ನ ಎಂಬುವವರೇ ನೇಣಿಗೆ ಶರಣಾಗಿರುವ ವ್ಯಕ್ತಿಯಾಗಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಪ್ರಸನ್ನ ಹಾಗೂ ಸೃಷ್ಟಿ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಈ ನಡುವೆ ಪ್ರಸನ್ನ ಸೃಷ್ಟಿಯ ಸ್ನೇಹಿತೆ ಸ್ಪಂದನಾಳನ್ನು ಪ್ರೀತಿ ಮಾಡುತ್ತಿದ್ದ. ಅಂತಿಮವಾಗಿ ಪ್ರಸನ್ನ ಹಾಗೂ ಸ್ಪಂದನಾ ಮದುವೆಯಾದರೆ ಒಂದೂವರೆ ವರ್ಷದ ಹಿಂದೆ ದಿನೇಶ್ ಎಂಬುವವರ ಜೊತೆ ಸೃಷ್ಟಿಯ ಮದುವೆ ಕೂಡ ನಡೆದು ಹೋಗಿತ್ತು.
ಇಬ್ಬರು ಬೇರೆ ಬೇರೆಯವರನ್ನು ಮದುವೆಯಾಗಿದ್ದರೂ ಪ್ರಸನ್ನ ಹಾಗೂ ಸೃಷ್ಟಿ ನಡುವೆ ಪ್ರೀತಿ ಮಾತುಕತೆ ನಡೆಯುತ್ತಿತ್ತು ಎನ್ನಲಾಗಿದೆ.
ಈ ವಿಚಾರ ಗೊತ್ತಾಗುತ್ತಿದ್ದಂತೆ ಸೃಷ್ಟಿ ಹಾಗೂ ದಿನೇಶ್ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಹೀಗಿರುವಾಗಲೇ ಡಿಸೆಂಬರ್.11ರಂದು ಸೃಷ್ಟಿ ಪತಿ ಮನೆಯಿಂದ ನಾಪತ್ತೆಯಾಗಿದ್ದಳು. ನಾಪತ್ತೆ ಬೆನ್ನಲ್ಲೇ ದಿನೇಶ್ ಅವರು ಕೆಸ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಆದರೆ ಡಿಸೆಂಬರ್.16ರಂದು ಶಿಂಷಾ ನದಿಯಲ್ಲಿ ಸೃಷ್ಟಿಯ ಶವ ಪತ್ತೆಯಾಗಿದ್ದು, ಈ ವಿಚಾರ ತಿಳಿಯುತ್ತಿದ್ದಂತೆ ಪ್ರಸನ್ನ ವಿಚಲಿತಗೊಂಡಿದ್ದ ಎನ್ನಲಾಗಿದೆ.
ಸೃಷ್ಟಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುವಾಗಲೇ ಇತ್ತ ಪ್ರಸನ್ನ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…