ಮಂಡ್ಯ

ಭಾರತ ತನ್ನ ಸಾಂಸ್ಕೃತಿಕ ಜ್ಞಾನದಿಂದ ಜಗತ್ತನ್ನು ಒಂದುಗೂಡಿಸುವ ಸಂಕಲ್ಪ ಮಾಡುತ್ತಿದೆ

ಮಂಡ್ಯ : ಶಕ್ತಿ, ಯುಕ್ತಿಗಳ ನಡುವೆ ಭಾರತ ತನ್ನ ಜ್ಞಾನದಿಂದ ಜಗತ್ತನ್ನು ಒಂದುಗೂಡಿಸುವ ಸಂಕಲ್ಪ ಮಾಡುತ್ತಿದೆ ಎಂದು ಮೈಸೂರು ವಿಭಾಗ ಕಾರ್ಯವಾಹಎಸ್.ಎಂ. ಮಹೇಶ್ ಅಭಿಪ್ರಾಯಿಸಿದರು.

ಮೈಸೂರು ವಿಭಾಗದ ಉದ್ಯೋಗಿ ಮತ್ತು ಮಂಡ್ಯ ಜಿಲ್ಲಾ ವಿದ್ಯಾರ್ಥಿ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅಮೆರಿಕಾ ಶಕ್ತಿಯಿಂದ ವಿಶ್ವದ ದೊಡ್ಡಣ್ಣನಾಗಿ ಮೆರೆಯಲು ಯತ್ನಿಸಿದರೆ, ಬ್ರಿಟನ್ ಬುದ್ಧಿವಂತಿಕೆಯಿಂದ ಹಾಗೂ ಚೀನಾ ವ್ಯಾಪಾರವನ್ನು ವಿಸ್ತರಿಸುವ ಮೂಲಕ ಪ್ರಬಲ ರಾಷ್ಟ್ರವಾಗಲು ಯತ್ನಿಸಿದ್ದವು.ಆದರೆ ಭಾರತ ತನ್ನ ಸಂಸ್ಕøತಿ, ಪರಂಪರೆಯ ಜ್ಞಾನದಿಂದಲೇ ವಿಶ್ವವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ ಎಂದು ಉದಾಹರಣೆ ಸಮೇತ ವಿವರಿಸಿದರು.

ರಾಮನ ಆದರ್ಶ ಆಡಳಿತ, ಕೃಷ್ಣನ ಧರ್ಮದ ಆಡಳಿತವನ್ನು ಕಂಡಿರುವ ಭರತ ಖಂಡದ ಇತ್ತೀಚಿನ ದಿನಗಳಲ್ಲಿ ವಿಕೃತ ಮನಸ್ಸಿನ ಶಕ್ತಿಗಳು ವಿಧ್ವಂಸಕ ಕೃತ್ಯಗಳನ್ನು ಮಾಡುತ್ತಿವೆ. ಹಿಂದೂ ಧರ್ಮವನ್ನು ಒಡೆದು ಮತಾಂತರದಂತಹ ಪಿಡುಗನ್ನು ನಮ್ಮ ನೆಲದಲ್ಲಿ ಪ್ರತಿಷ್ಠಾಪಿಸಲು ಮುಂದಾಗಿವೆ. ಇದರಿಂದ ನಮ್ಮ ಆಚರಣೆಗಳು, ಪರಂಪರೆಗಳ ಮೇಲೂ ಹೊಡೆತ ಬೀಳುತ್ತಿದೆ. ಅವಿಭಕ್ತ ಕುಟುಂಬಗಳೆಲ್ಲವೂ ವಿಭಕ್ತ ಕುಟುಂಬಗಳಾಗಿವೆ. ವಿದೇಶಿ ಮನಸ್ಥಿತಿಗೆ ದಾಸರಾಗುತ್ತಿರುವುದೇ ಇದಕ್ಕೆ ಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 

andolana

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

3 hours ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

3 hours ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

4 hours ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

4 hours ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

4 hours ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

4 hours ago