ಮಂಡ್ಯ

ಭಾರತ ತನ್ನ ಸಾಂಸ್ಕೃತಿಕ ಜ್ಞಾನದಿಂದ ಜಗತ್ತನ್ನು ಒಂದುಗೂಡಿಸುವ ಸಂಕಲ್ಪ ಮಾಡುತ್ತಿದೆ

ಮಂಡ್ಯ : ಶಕ್ತಿ, ಯುಕ್ತಿಗಳ ನಡುವೆ ಭಾರತ ತನ್ನ ಜ್ಞಾನದಿಂದ ಜಗತ್ತನ್ನು ಒಂದುಗೂಡಿಸುವ ಸಂಕಲ್ಪ ಮಾಡುತ್ತಿದೆ ಎಂದು ಮೈಸೂರು ವಿಭಾಗ ಕಾರ್ಯವಾಹಎಸ್.ಎಂ. ಮಹೇಶ್ ಅಭಿಪ್ರಾಯಿಸಿದರು.

ಮೈಸೂರು ವಿಭಾಗದ ಉದ್ಯೋಗಿ ಮತ್ತು ಮಂಡ್ಯ ಜಿಲ್ಲಾ ವಿದ್ಯಾರ್ಥಿ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅಮೆರಿಕಾ ಶಕ್ತಿಯಿಂದ ವಿಶ್ವದ ದೊಡ್ಡಣ್ಣನಾಗಿ ಮೆರೆಯಲು ಯತ್ನಿಸಿದರೆ, ಬ್ರಿಟನ್ ಬುದ್ಧಿವಂತಿಕೆಯಿಂದ ಹಾಗೂ ಚೀನಾ ವ್ಯಾಪಾರವನ್ನು ವಿಸ್ತರಿಸುವ ಮೂಲಕ ಪ್ರಬಲ ರಾಷ್ಟ್ರವಾಗಲು ಯತ್ನಿಸಿದ್ದವು.ಆದರೆ ಭಾರತ ತನ್ನ ಸಂಸ್ಕøತಿ, ಪರಂಪರೆಯ ಜ್ಞಾನದಿಂದಲೇ ವಿಶ್ವವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ ಎಂದು ಉದಾಹರಣೆ ಸಮೇತ ವಿವರಿಸಿದರು.

ರಾಮನ ಆದರ್ಶ ಆಡಳಿತ, ಕೃಷ್ಣನ ಧರ್ಮದ ಆಡಳಿತವನ್ನು ಕಂಡಿರುವ ಭರತ ಖಂಡದ ಇತ್ತೀಚಿನ ದಿನಗಳಲ್ಲಿ ವಿಕೃತ ಮನಸ್ಸಿನ ಶಕ್ತಿಗಳು ವಿಧ್ವಂಸಕ ಕೃತ್ಯಗಳನ್ನು ಮಾಡುತ್ತಿವೆ. ಹಿಂದೂ ಧರ್ಮವನ್ನು ಒಡೆದು ಮತಾಂತರದಂತಹ ಪಿಡುಗನ್ನು ನಮ್ಮ ನೆಲದಲ್ಲಿ ಪ್ರತಿಷ್ಠಾಪಿಸಲು ಮುಂದಾಗಿವೆ. ಇದರಿಂದ ನಮ್ಮ ಆಚರಣೆಗಳು, ಪರಂಪರೆಗಳ ಮೇಲೂ ಹೊಡೆತ ಬೀಳುತ್ತಿದೆ. ಅವಿಭಕ್ತ ಕುಟುಂಬಗಳೆಲ್ಲವೂ ವಿಭಕ್ತ ಕುಟುಂಬಗಳಾಗಿವೆ. ವಿದೇಶಿ ಮನಸ್ಥಿತಿಗೆ ದಾಸರಾಗುತ್ತಿರುವುದೇ ಇದಕ್ಕೆ ಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 

andolana

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

9 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

10 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

10 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

10 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

11 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

11 hours ago