ಮಂಡ್ಯ

ಭಾರತ ತನ್ನ ಸಾಂಸ್ಕೃತಿಕ ಜ್ಞಾನದಿಂದ ಜಗತ್ತನ್ನು ಒಂದುಗೂಡಿಸುವ ಸಂಕಲ್ಪ ಮಾಡುತ್ತಿದೆ

ಮಂಡ್ಯ : ಶಕ್ತಿ, ಯುಕ್ತಿಗಳ ನಡುವೆ ಭಾರತ ತನ್ನ ಜ್ಞಾನದಿಂದ ಜಗತ್ತನ್ನು ಒಂದುಗೂಡಿಸುವ ಸಂಕಲ್ಪ ಮಾಡುತ್ತಿದೆ ಎಂದು ಮೈಸೂರು ವಿಭಾಗ ಕಾರ್ಯವಾಹಎಸ್.ಎಂ. ಮಹೇಶ್ ಅಭಿಪ್ರಾಯಿಸಿದರು.

ಮೈಸೂರು ವಿಭಾಗದ ಉದ್ಯೋಗಿ ಮತ್ತು ಮಂಡ್ಯ ಜಿಲ್ಲಾ ವಿದ್ಯಾರ್ಥಿ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅಮೆರಿಕಾ ಶಕ್ತಿಯಿಂದ ವಿಶ್ವದ ದೊಡ್ಡಣ್ಣನಾಗಿ ಮೆರೆಯಲು ಯತ್ನಿಸಿದರೆ, ಬ್ರಿಟನ್ ಬುದ್ಧಿವಂತಿಕೆಯಿಂದ ಹಾಗೂ ಚೀನಾ ವ್ಯಾಪಾರವನ್ನು ವಿಸ್ತರಿಸುವ ಮೂಲಕ ಪ್ರಬಲ ರಾಷ್ಟ್ರವಾಗಲು ಯತ್ನಿಸಿದ್ದವು.ಆದರೆ ಭಾರತ ತನ್ನ ಸಂಸ್ಕøತಿ, ಪರಂಪರೆಯ ಜ್ಞಾನದಿಂದಲೇ ವಿಶ್ವವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ ಎಂದು ಉದಾಹರಣೆ ಸಮೇತ ವಿವರಿಸಿದರು.

ರಾಮನ ಆದರ್ಶ ಆಡಳಿತ, ಕೃಷ್ಣನ ಧರ್ಮದ ಆಡಳಿತವನ್ನು ಕಂಡಿರುವ ಭರತ ಖಂಡದ ಇತ್ತೀಚಿನ ದಿನಗಳಲ್ಲಿ ವಿಕೃತ ಮನಸ್ಸಿನ ಶಕ್ತಿಗಳು ವಿಧ್ವಂಸಕ ಕೃತ್ಯಗಳನ್ನು ಮಾಡುತ್ತಿವೆ. ಹಿಂದೂ ಧರ್ಮವನ್ನು ಒಡೆದು ಮತಾಂತರದಂತಹ ಪಿಡುಗನ್ನು ನಮ್ಮ ನೆಲದಲ್ಲಿ ಪ್ರತಿಷ್ಠಾಪಿಸಲು ಮುಂದಾಗಿವೆ. ಇದರಿಂದ ನಮ್ಮ ಆಚರಣೆಗಳು, ಪರಂಪರೆಗಳ ಮೇಲೂ ಹೊಡೆತ ಬೀಳುತ್ತಿದೆ. ಅವಿಭಕ್ತ ಕುಟುಂಬಗಳೆಲ್ಲವೂ ವಿಭಕ್ತ ಕುಟುಂಬಗಳಾಗಿವೆ. ವಿದೇಶಿ ಮನಸ್ಥಿತಿಗೆ ದಾಸರಾಗುತ್ತಿರುವುದೇ ಇದಕ್ಕೆ ಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 

andolana

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

26 mins ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

4 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

5 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

5 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

5 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

6 hours ago