ಮಂಡ್ಯ

ಭಾರತ ತನ್ನ ಸಾಂಸ್ಕೃತಿಕ ಜ್ಞಾನದಿಂದ ಜಗತ್ತನ್ನು ಒಂದುಗೂಡಿಸುವ ಸಂಕಲ್ಪ ಮಾಡುತ್ತಿದೆ

ಮಂಡ್ಯ : ಶಕ್ತಿ, ಯುಕ್ತಿಗಳ ನಡುವೆ ಭಾರತ ತನ್ನ ಜ್ಞಾನದಿಂದ ಜಗತ್ತನ್ನು ಒಂದುಗೂಡಿಸುವ ಸಂಕಲ್ಪ ಮಾಡುತ್ತಿದೆ ಎಂದು ಮೈಸೂರು ವಿಭಾಗ ಕಾರ್ಯವಾಹಎಸ್.ಎಂ. ಮಹೇಶ್ ಅಭಿಪ್ರಾಯಿಸಿದರು.

ಮೈಸೂರು ವಿಭಾಗದ ಉದ್ಯೋಗಿ ಮತ್ತು ಮಂಡ್ಯ ಜಿಲ್ಲಾ ವಿದ್ಯಾರ್ಥಿ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅಮೆರಿಕಾ ಶಕ್ತಿಯಿಂದ ವಿಶ್ವದ ದೊಡ್ಡಣ್ಣನಾಗಿ ಮೆರೆಯಲು ಯತ್ನಿಸಿದರೆ, ಬ್ರಿಟನ್ ಬುದ್ಧಿವಂತಿಕೆಯಿಂದ ಹಾಗೂ ಚೀನಾ ವ್ಯಾಪಾರವನ್ನು ವಿಸ್ತರಿಸುವ ಮೂಲಕ ಪ್ರಬಲ ರಾಷ್ಟ್ರವಾಗಲು ಯತ್ನಿಸಿದ್ದವು.ಆದರೆ ಭಾರತ ತನ್ನ ಸಂಸ್ಕøತಿ, ಪರಂಪರೆಯ ಜ್ಞಾನದಿಂದಲೇ ವಿಶ್ವವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ ಎಂದು ಉದಾಹರಣೆ ಸಮೇತ ವಿವರಿಸಿದರು.

ರಾಮನ ಆದರ್ಶ ಆಡಳಿತ, ಕೃಷ್ಣನ ಧರ್ಮದ ಆಡಳಿತವನ್ನು ಕಂಡಿರುವ ಭರತ ಖಂಡದ ಇತ್ತೀಚಿನ ದಿನಗಳಲ್ಲಿ ವಿಕೃತ ಮನಸ್ಸಿನ ಶಕ್ತಿಗಳು ವಿಧ್ವಂಸಕ ಕೃತ್ಯಗಳನ್ನು ಮಾಡುತ್ತಿವೆ. ಹಿಂದೂ ಧರ್ಮವನ್ನು ಒಡೆದು ಮತಾಂತರದಂತಹ ಪಿಡುಗನ್ನು ನಮ್ಮ ನೆಲದಲ್ಲಿ ಪ್ರತಿಷ್ಠಾಪಿಸಲು ಮುಂದಾಗಿವೆ. ಇದರಿಂದ ನಮ್ಮ ಆಚರಣೆಗಳು, ಪರಂಪರೆಗಳ ಮೇಲೂ ಹೊಡೆತ ಬೀಳುತ್ತಿದೆ. ಅವಿಭಕ್ತ ಕುಟುಂಬಗಳೆಲ್ಲವೂ ವಿಭಕ್ತ ಕುಟುಂಬಗಳಾಗಿವೆ. ವಿದೇಶಿ ಮನಸ್ಥಿತಿಗೆ ದಾಸರಾಗುತ್ತಿರುವುದೇ ಇದಕ್ಕೆ ಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago