ಮಂಡ್ಯ: ಪಟಾಕಿ ಮದ್ದು ಸಿಡಿದು ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ಸೋಮವಾರ ( ಮಾರ್ಚ್ 25 ) ಬೆಳಗಿನ ಜಾವ ನಡೆದಿದೆ.
ತಮಿಳುನಾಡು ಮೂಲದ ರಮೇಶ್ (45) ಮೃತ ವ್ಯಕ್ತಿಯಾಗಿದ್ದು, ವಾನಗಾರ್ (55) ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿ. ಕೆಬ್ಬಹಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆಯುವ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸುವ ಜವಾಬ್ದಾರಿಯನ್ನು ತಮಿಳುನಾಡು ಮೂಲದ ವ್ಯಕ್ತಿಗಳಿಗೆ ನೀಡಲಾಗಿತ್ತು. ಅದರಂತೆ ನಾಲ್ವರು ಗ್ರಾಮಕ್ಕೆ ಬಂದು ಆಲೆಮನೆಯೊಂದರಲ್ಲಿ ವಾಸ್ತವ್ಯ ಹೂಡಿದ್ದರು.
ಭಾನುವಾರ ರಾತ್ರಿ ಹಬ್ಬ ಮುಗಿದ ನಂತರ ಆಲೆಮನೆಯಲ್ಲಿ ಮೂವರು ಕಾರ್ಮಿಕರು ನಿದ್ರೆ ಮಾಡುತ್ತಿದ್ದಾಗ, ರಮೇಶ್ ಮದ್ದು ತುಂಬುವ ವೇಳೆ ಈ ಅವಘಡ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಆಲೆಮನೆ ಹೆಂಚು ಹಾರು ಹೋಗಿದ್ದು, ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ರಮೇಶ್ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಿಶೀಲನೆ ನಡೆಸಿದ ಡಿಸಿ, ಎಸ್ಪಿ:
ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸ್ಥಳೀಯರಿಂದ ಮಾಹಿತಿ ಪಡೆದರು. ಘಟನಾ ಸ್ಥಳಕ್ಕೆ ಮೈಸೂರು ಪ್ರಾಂತ್ಯದ ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ.ಎಸ್. ಜಯರಾಮಯ್ಯ, ಮೈಸೂರು ವಲಯ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಪಿ. ಚಂದನ್ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು. ಮಂಡ್ಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ.ಎಂ. ರಾಘವೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ವೆಂಕಟೇಶ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿದ್ದಾರೆ.
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…