ಮಂಡ್ಯ

ಮಂಡ್ಯ: ಪಟಾಕಿ ಮದ್ದು ಸಿಡಿದು ವ್ಯಕ್ತಿಯೋರ್ವ ಸಾವು

ಮಂಡ್ಯ: ಪಟಾಕಿ ಮದ್ದು ಸಿಡಿದು ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ಸೋಮವಾರ ( ಮಾರ್ಚ್‌ 25 ) ಬೆಳಗಿನ ಜಾವ ನಡೆದಿದೆ.

ತಮಿಳುನಾಡು ಮೂಲದ ರಮೇಶ್ (45) ಮೃತ ವ್ಯಕ್ತಿಯಾಗಿದ್ದು, ವಾನಗಾರ್ (55) ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿ. ಕೆಬ್ಬಹಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆಯುವ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸುವ ಜವಾಬ್ದಾರಿಯನ್ನು ತಮಿಳುನಾಡು ಮೂಲದ ವ್ಯಕ್ತಿಗಳಿಗೆ ನೀಡಲಾಗಿತ್ತು. ಅದರಂತೆ ನಾಲ್ವರು ಗ್ರಾಮಕ್ಕೆ ಬಂದು ಆಲೆಮನೆಯೊಂದರಲ್ಲಿ ವಾಸ್ತವ್ಯ ಹೂಡಿದ್ದರು.

ಭಾನುವಾರ ರಾತ್ರಿ ಹಬ್ಬ ಮುಗಿದ ನಂತರ ಆಲೆಮನೆಯಲ್ಲಿ ಮೂವರು ಕಾರ್ಮಿಕರು ನಿದ್ರೆ ಮಾಡುತ್ತಿದ್ದಾಗ, ರಮೇಶ್ ಮದ್ದು ತುಂಬುವ ವೇಳೆ ಈ ಅವಘಡ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಆಲೆಮನೆ ಹೆಂಚು ಹಾರು ಹೋಗಿದ್ದು, ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ರಮೇಶ್ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಿಶೀಲನೆ ನಡೆಸಿದ ಡಿಸಿ, ಎಸ್‌ಪಿ:

ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸ್ಥಳೀಯರಿಂದ ಮಾಹಿತಿ ಪಡೆದರು. ಘಟನಾ ಸ್ಥಳಕ್ಕೆ ಮೈಸೂರು ಪ್ರಾಂತ್ಯದ ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ.ಎಸ್. ಜಯರಾಮಯ್ಯ, ಮೈಸೂರು ವಲಯ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಪಿ. ಚಂದನ್ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು. ಮಂಡ್ಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ.ಎಂ. ರಾಘವೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ವೆಂಕಟೇಶ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿದ್ದಾರೆ.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago