ಮಂಡ್ಯ

ಮಂಡ್ಯ: ಪಟಾಕಿ ಮದ್ದು ಸಿಡಿದು ವ್ಯಕ್ತಿಯೋರ್ವ ಸಾವು

ಮಂಡ್ಯ: ಪಟಾಕಿ ಮದ್ದು ಸಿಡಿದು ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಜಿ.ಕೆಬ್ಬಹಳ್ಳಿ ಗ್ರಾಮದಲ್ಲಿ ಸೋಮವಾರ ( ಮಾರ್ಚ್‌ 25 ) ಬೆಳಗಿನ ಜಾವ ನಡೆದಿದೆ.

ತಮಿಳುನಾಡು ಮೂಲದ ರಮೇಶ್ (45) ಮೃತ ವ್ಯಕ್ತಿಯಾಗಿದ್ದು, ವಾನಗಾರ್ (55) ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿ. ಕೆಬ್ಬಹಳ್ಳಿ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆಯುವ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸುವ ಜವಾಬ್ದಾರಿಯನ್ನು ತಮಿಳುನಾಡು ಮೂಲದ ವ್ಯಕ್ತಿಗಳಿಗೆ ನೀಡಲಾಗಿತ್ತು. ಅದರಂತೆ ನಾಲ್ವರು ಗ್ರಾಮಕ್ಕೆ ಬಂದು ಆಲೆಮನೆಯೊಂದರಲ್ಲಿ ವಾಸ್ತವ್ಯ ಹೂಡಿದ್ದರು.

ಭಾನುವಾರ ರಾತ್ರಿ ಹಬ್ಬ ಮುಗಿದ ನಂತರ ಆಲೆಮನೆಯಲ್ಲಿ ಮೂವರು ಕಾರ್ಮಿಕರು ನಿದ್ರೆ ಮಾಡುತ್ತಿದ್ದಾಗ, ರಮೇಶ್ ಮದ್ದು ತುಂಬುವ ವೇಳೆ ಈ ಅವಘಡ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಆಲೆಮನೆ ಹೆಂಚು ಹಾರು ಹೋಗಿದ್ದು, ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ರಮೇಶ್ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಿಶೀಲನೆ ನಡೆಸಿದ ಡಿಸಿ, ಎಸ್‌ಪಿ:

ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸ್ಥಳೀಯರಿಂದ ಮಾಹಿತಿ ಪಡೆದರು. ಘಟನಾ ಸ್ಥಳಕ್ಕೆ ಮೈಸೂರು ಪ್ರಾಂತ್ಯದ ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ.ಎಸ್. ಜಯರಾಮಯ್ಯ, ಮೈಸೂರು ವಲಯ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಪಿ. ಚಂದನ್ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು. ಮಂಡ್ಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಿ.ಎಂ. ರಾಘವೇಂದ್ರ, ಅಗ್ನಿಶಾಮಕ ಠಾಣಾಧಿಕಾರಿ ವೆಂಕಟೇಶ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿದ್ದಾರೆ.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago