ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ.
ರಾಮಚಂದ್ರು ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು, ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ ಯುವಕನ ಹೊಟ್ಟೆಯ ಭಾಗ ಛಿದ್ರ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಳೆದ ಕೆಲ ದಿನಗಳಿಂದ ಅಪ್ರಾಪ್ತ ಪ್ರಿಯತಮೆಯು ರಾಮಚಂದ್ರನ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಹೀಗಾಗಿ ಮನನೊಂದಿದ್ದ ರಾಮಚಂದ್ರ ಆಕೆಯ ಮನೆಯ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…